ಕೊಡಗು

ಸಂಬಳ ಪಾವತಿಗೆ ಆಗ್ರಹಿಸಿ ದಿಢೀರ್‌ ಪ್ರತಿಭಟನೆ ನಡೆಸಿದ ಕೆಎಸ್‌ಆರ್‌ಟಿಸಿ ಚಾಲಕರು

ಮಡಿಕೇರಿ: ಸರಿಯಾಗಿ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿ ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿಯ 48 ಹೊರಗುತ್ತಿಗೆ ಚಾಲಕರು ದಿಢೀರ್‌ ಪ್ರತಿಭಟನೆ ನಡೆಸಿದರು.

ಇಂದು ಬೆಳಿಗ್ಗೆಯೇ ಮಡಿಕೇರಿ ಬಸ್‌ ನಿಲ್ದಾಣದಲ್ಲಿ ಕರ್ತವ್ಯ ಸ್ಥಗಿತಗೊಳಿಸಿದ ಚಾಲಕರು, ನಮಗೆ ಸಂಬಳ ಸರಿಯಾಗಿ ಆಗುತ್ತಿಲ್ಲ. ಇದರಿಂದ ಜೀವನ ನಡೆಸಲು ಕಷ್ಟವಾಗಿದೆ. ಇದನ್ನೇ ನಂಬಿಕೊಂಡಿರುವ ನಾವು ಸಂಬಳಕ್ಕಾಗಿ ಕಾಯುತ್ತಾ ಕುಳಿತಿರುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೊರಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದ ಚಾಲಕರು, ಪೂಜ್ಯಾಯ ಸೆಕ್ಯುರಿಟಿ ಏಜೆನ್ಸಿ ಮೂಲಕ ಕರ್ತವ್ಯ ನಿರ್ವಹಿಸುತ್ತಿದ್ದರು.

ಈ ಹಿಂದೆ ಇದ್ದ ಏಜೆನ್ಸಿ ಪ್ರತಿ ತಿಂಗಳು 23 ಸಾವಿರ ರೂ ಸಂಬಳ ನೀಡುತ್ತಿತ್ತು. ಆದರೆ ಈ ಏಜೆನ್ಸಿ ಬದಲಾಗಿದ್ದು, ಪೂಜ್ಯಾಯ ಸೆಕ್ಯುರಿಟಿ ಏಜೆನ್ಸಿ 13 ರಿಂದ 14 ಸಾವಿರ ರೂ ಪಾವತಿಸುತ್ತಿದೆ.

ನಾವು ಒತ್ತಾಯ ಮಾಡಿದ ಬಳಿಕ ನಿನ್ನೆ ಅರ್ಧ ಸಂಬಳ ಪಾವತಿಸಿದ್ದಾರೆ. ಪೂರ್ಣ ಪ್ರಮಾಣದ ವೇತನ ಹಾಕುವವರೆಗೂ ಬಸ್ಸು ಸಂಚಾರ ಆರಂಭ ಮಾಡುವುದಿಲ್ಲ ಎಂದು ಚಾಲಕರೆಲ್ಲಾ ಪಟ್ಟು ಹಿಡಿದ ಘಟನೆಯೂ ನಡೆಯಿತು.

ದಿಢೀರ್‌ ಪ್ರತಿಭಟನೆಯಿಂದ ಕೊಡಗು ಜಿಲ್ಲೆಯ ಹಲವಾರು ಮಾರ್ಗಗಳಲ್ಲಿ ಸರ್ಕಾರಿ ಬಸ್ ಸಂಚಾರ ವ್ಯತ್ಯಯಗೊಂಡು, ಗ್ರಾಮೀಣ ಭಾಗದಲ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಯಿತು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗುಂಡ್ಲುಪೇಟೆ| ಕಾಡಿನಿಂದ‌ ದಾರಿ ತಪ್ಪಿ ಮನೆಗೆ ನುಗ್ಗಿದ ಜಿಂಕೆ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…

13 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

1 hour ago

ಚಿಕ್ಕಮಗಳೂರು| ತೋಟದಲ್ಲಿ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…

2 hours ago

ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ…

2 hours ago

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಕೇಂದ್ರ ಸರ್ಕಾರದ ವಿರುದ್ಧ…

2 hours ago

ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ

ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್‌…

3 hours ago