ಮಡಿಕೇರಿ: ಸರಿಯಾಗಿ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿ ಮಡಿಕೇರಿಯಲ್ಲಿ ಕೆಎಸ್ಆರ್ಟಿಸಿಯ 48 ಹೊರಗುತ್ತಿಗೆ ಚಾಲಕರು ದಿಢೀರ್ ಪ್ರತಿಭಟನೆ ನಡೆಸಿದರು.
ಇಂದು ಬೆಳಿಗ್ಗೆಯೇ ಮಡಿಕೇರಿ ಬಸ್ ನಿಲ್ದಾಣದಲ್ಲಿ ಕರ್ತವ್ಯ ಸ್ಥಗಿತಗೊಳಿಸಿದ ಚಾಲಕರು, ನಮಗೆ ಸಂಬಳ ಸರಿಯಾಗಿ ಆಗುತ್ತಿಲ್ಲ. ಇದರಿಂದ ಜೀವನ ನಡೆಸಲು ಕಷ್ಟವಾಗಿದೆ. ಇದನ್ನೇ ನಂಬಿಕೊಂಡಿರುವ ನಾವು ಸಂಬಳಕ್ಕಾಗಿ ಕಾಯುತ್ತಾ ಕುಳಿತಿರುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೊರಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದ ಚಾಲಕರು, ಪೂಜ್ಯಾಯ ಸೆಕ್ಯುರಿಟಿ ಏಜೆನ್ಸಿ ಮೂಲಕ ಕರ್ತವ್ಯ ನಿರ್ವಹಿಸುತ್ತಿದ್ದರು.
ಈ ಹಿಂದೆ ಇದ್ದ ಏಜೆನ್ಸಿ ಪ್ರತಿ ತಿಂಗಳು 23 ಸಾವಿರ ರೂ ಸಂಬಳ ನೀಡುತ್ತಿತ್ತು. ಆದರೆ ಈ ಏಜೆನ್ಸಿ ಬದಲಾಗಿದ್ದು, ಪೂಜ್ಯಾಯ ಸೆಕ್ಯುರಿಟಿ ಏಜೆನ್ಸಿ 13 ರಿಂದ 14 ಸಾವಿರ ರೂ ಪಾವತಿಸುತ್ತಿದೆ.
ನಾವು ಒತ್ತಾಯ ಮಾಡಿದ ಬಳಿಕ ನಿನ್ನೆ ಅರ್ಧ ಸಂಬಳ ಪಾವತಿಸಿದ್ದಾರೆ. ಪೂರ್ಣ ಪ್ರಮಾಣದ ವೇತನ ಹಾಕುವವರೆಗೂ ಬಸ್ಸು ಸಂಚಾರ ಆರಂಭ ಮಾಡುವುದಿಲ್ಲ ಎಂದು ಚಾಲಕರೆಲ್ಲಾ ಪಟ್ಟು ಹಿಡಿದ ಘಟನೆಯೂ ನಡೆಯಿತು.
ದಿಢೀರ್ ಪ್ರತಿಭಟನೆಯಿಂದ ಕೊಡಗು ಜಿಲ್ಲೆಯ ಹಲವಾರು ಮಾರ್ಗಗಳಲ್ಲಿ ಸರ್ಕಾರಿ ಬಸ್ ಸಂಚಾರ ವ್ಯತ್ಯಯಗೊಂಡು, ಗ್ರಾಮೀಣ ಭಾಗದಲ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಯಿತು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…
ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…
ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್ಗೆ…
ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ…
ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್…