ಕೊಡಗು

ಸಂಬಳ ಪಾವತಿಗೆ ಆಗ್ರಹಿಸಿ ದಿಢೀರ್‌ ಪ್ರತಿಭಟನೆ ನಡೆಸಿದ ಕೆಎಸ್‌ಆರ್‌ಟಿಸಿ ಚಾಲಕರು

ಮಡಿಕೇರಿ: ಸರಿಯಾಗಿ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿ ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿಯ 48 ಹೊರಗುತ್ತಿಗೆ ಚಾಲಕರು ದಿಢೀರ್‌ ಪ್ರತಿಭಟನೆ ನಡೆಸಿದರು.

ಇಂದು ಬೆಳಿಗ್ಗೆಯೇ ಮಡಿಕೇರಿ ಬಸ್‌ ನಿಲ್ದಾಣದಲ್ಲಿ ಕರ್ತವ್ಯ ಸ್ಥಗಿತಗೊಳಿಸಿದ ಚಾಲಕರು, ನಮಗೆ ಸಂಬಳ ಸರಿಯಾಗಿ ಆಗುತ್ತಿಲ್ಲ. ಇದರಿಂದ ಜೀವನ ನಡೆಸಲು ಕಷ್ಟವಾಗಿದೆ. ಇದನ್ನೇ ನಂಬಿಕೊಂಡಿರುವ ನಾವು ಸಂಬಳಕ್ಕಾಗಿ ಕಾಯುತ್ತಾ ಕುಳಿತಿರುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೊರಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದ ಚಾಲಕರು, ಪೂಜ್ಯಾಯ ಸೆಕ್ಯುರಿಟಿ ಏಜೆನ್ಸಿ ಮೂಲಕ ಕರ್ತವ್ಯ ನಿರ್ವಹಿಸುತ್ತಿದ್ದರು.

ಈ ಹಿಂದೆ ಇದ್ದ ಏಜೆನ್ಸಿ ಪ್ರತಿ ತಿಂಗಳು 23 ಸಾವಿರ ರೂ ಸಂಬಳ ನೀಡುತ್ತಿತ್ತು. ಆದರೆ ಈ ಏಜೆನ್ಸಿ ಬದಲಾಗಿದ್ದು, ಪೂಜ್ಯಾಯ ಸೆಕ್ಯುರಿಟಿ ಏಜೆನ್ಸಿ 13 ರಿಂದ 14 ಸಾವಿರ ರೂ ಪಾವತಿಸುತ್ತಿದೆ.

ನಾವು ಒತ್ತಾಯ ಮಾಡಿದ ಬಳಿಕ ನಿನ್ನೆ ಅರ್ಧ ಸಂಬಳ ಪಾವತಿಸಿದ್ದಾರೆ. ಪೂರ್ಣ ಪ್ರಮಾಣದ ವೇತನ ಹಾಕುವವರೆಗೂ ಬಸ್ಸು ಸಂಚಾರ ಆರಂಭ ಮಾಡುವುದಿಲ್ಲ ಎಂದು ಚಾಲಕರೆಲ್ಲಾ ಪಟ್ಟು ಹಿಡಿದ ಘಟನೆಯೂ ನಡೆಯಿತು.

ದಿಢೀರ್‌ ಪ್ರತಿಭಟನೆಯಿಂದ ಕೊಡಗು ಜಿಲ್ಲೆಯ ಹಲವಾರು ಮಾರ್ಗಗಳಲ್ಲಿ ಸರ್ಕಾರಿ ಬಸ್ ಸಂಚಾರ ವ್ಯತ್ಯಯಗೊಂಡು, ಗ್ರಾಮೀಣ ಭಾಗದಲ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಯಿತು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

31 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago