ಮಡಿಕೇರಿ: ಸರಿಯಾಗಿ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿ ಮಡಿಕೇರಿಯಲ್ಲಿ ಕೆಎಸ್ಆರ್ಟಿಸಿಯ 48 ಹೊರಗುತ್ತಿಗೆ ಚಾಲಕರು ದಿಢೀರ್ ಪ್ರತಿಭಟನೆ ನಡೆಸಿದರು.
ಇಂದು ಬೆಳಿಗ್ಗೆಯೇ ಮಡಿಕೇರಿ ಬಸ್ ನಿಲ್ದಾಣದಲ್ಲಿ ಕರ್ತವ್ಯ ಸ್ಥಗಿತಗೊಳಿಸಿದ ಚಾಲಕರು, ನಮಗೆ ಸಂಬಳ ಸರಿಯಾಗಿ ಆಗುತ್ತಿಲ್ಲ. ಇದರಿಂದ ಜೀವನ ನಡೆಸಲು ಕಷ್ಟವಾಗಿದೆ. ಇದನ್ನೇ ನಂಬಿಕೊಂಡಿರುವ ನಾವು ಸಂಬಳಕ್ಕಾಗಿ ಕಾಯುತ್ತಾ ಕುಳಿತಿರುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೊರಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದ ಚಾಲಕರು, ಪೂಜ್ಯಾಯ ಸೆಕ್ಯುರಿಟಿ ಏಜೆನ್ಸಿ ಮೂಲಕ ಕರ್ತವ್ಯ ನಿರ್ವಹಿಸುತ್ತಿದ್ದರು.
ಈ ಹಿಂದೆ ಇದ್ದ ಏಜೆನ್ಸಿ ಪ್ರತಿ ತಿಂಗಳು 23 ಸಾವಿರ ರೂ ಸಂಬಳ ನೀಡುತ್ತಿತ್ತು. ಆದರೆ ಈ ಏಜೆನ್ಸಿ ಬದಲಾಗಿದ್ದು, ಪೂಜ್ಯಾಯ ಸೆಕ್ಯುರಿಟಿ ಏಜೆನ್ಸಿ 13 ರಿಂದ 14 ಸಾವಿರ ರೂ ಪಾವತಿಸುತ್ತಿದೆ.
ನಾವು ಒತ್ತಾಯ ಮಾಡಿದ ಬಳಿಕ ನಿನ್ನೆ ಅರ್ಧ ಸಂಬಳ ಪಾವತಿಸಿದ್ದಾರೆ. ಪೂರ್ಣ ಪ್ರಮಾಣದ ವೇತನ ಹಾಕುವವರೆಗೂ ಬಸ್ಸು ಸಂಚಾರ ಆರಂಭ ಮಾಡುವುದಿಲ್ಲ ಎಂದು ಚಾಲಕರೆಲ್ಲಾ ಪಟ್ಟು ಹಿಡಿದ ಘಟನೆಯೂ ನಡೆಯಿತು.
ದಿಢೀರ್ ಪ್ರತಿಭಟನೆಯಿಂದ ಕೊಡಗು ಜಿಲ್ಲೆಯ ಹಲವಾರು ಮಾರ್ಗಗಳಲ್ಲಿ ಸರ್ಕಾರಿ ಬಸ್ ಸಂಚಾರ ವ್ಯತ್ಯಯಗೊಂಡು, ಗ್ರಾಮೀಣ ಭಾಗದಲ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಯಿತು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…