ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ನೆರೆವೇರಿತು.
ಮುತ್ತಪ್ಪನ್ ತೆರೆ ಮಹೋತ್ಸವವನ್ನು ಸಾವಿರಾರು ಭಕ್ತರು ಆಗಮಿಸಿ ದೇವರ ಆಶೀರ್ವಾದ ಪಡೆದು ಪುನೀತರಾದರು. ಐದು ದಿನಗಳ ಕಾಲ ನಡೆದ ವಾರ್ಷಿಕೋತ್ಸವದಲ್ಲಿ ಗಣಪತಿ ಹೋಮ, ಚಂಡಿಕಾ ಹೋಮ, ದುರ್ಗಾ ಪೂಜೆ, ಆಶ್ಲೇಷಾ ಬಲಿ, ನಾಗಹೋಮ ಸೇರಿದಂತೆ ವಿವಿಧ ಪೂಜಾ ಕಾರ್ಯಗಳೊಂದಿಗೆ ಸಂಭ್ರಮದಿಂದ ನಡೆಯಿತು.
ಈ ಬಾರಿ ಭಕ್ತರ ಹರಕೆಯ ಏಳು ವಸೂರಿ ಮಾಲ ಕೋಲವು ಕೊಡಗಿನ ಪುಣ್ಯ ನದಿ ಕಾವೇರಿಯಿಂದ ಹೊರಟು ಪಟ್ಟಣ ಪ್ರವೇಶಿಸುದಂತೆ ಸಾವಿರಾರು ಭಕ್ತರು ನಡು ರಾತ್ರಿಯಲ್ಲಿ ಬರಮಾಡಿಕೊಂಡರು.
ವರ್ಷಂಪ್ರತಿ ನಡೆಯುವ ಮುತ್ತಪ್ಪನ, ತಿರುವಪ್ಪ, ಶಾಸ್ತಪ್ಪ, ಗುಳಿಗ, ಭಗವತಿ, ವಿಷ್ಣುಮೂರ್ತಿ ಹಾಗೂ ವಸೂರಿ ಮಾಲ ತೆರೆಯನ್ನು ಭಕ್ತರು ಹರ್ಷೋದ್ಗಾರದೊಂದಿಗೆ ಕಣ್ತುಂಬಿಕೊಂಡರು.
ವಾರ್ಷಿಕೋತ್ಸವದ ಪ್ರಯುಕ್ತ ರಿಪ್ಲೇಕ್ಸನ್ ನೃತ್ಯಶಾಲೆ ನೆಲ್ಲಿಹುದಿಕೇರಿ ವಿದ್ಯಾರ್ಥಿಗಳು ನಡೆಸಿಕೊಟ್ಟ ಭರತನಾಟ್ಯ ಪ್ರದರ್ಶನ ಭಕ್ತರ ಗಮನ ಸೆಳೆಯಿತು.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…