ಕೊಡಗು

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ನೆರೆವೇರಿತು.

ಮುತ್ತಪ್ಪನ್ ತೆರೆ ಮಹೋತ್ಸವವನ್ನು ಸಾವಿರಾರು ಭಕ್ತರು ಆಗಮಿಸಿ ದೇವರ ಆಶೀರ್ವಾದ ಪಡೆದು ಪುನೀತರಾದರು. ಐದು ದಿನಗಳ ಕಾಲ ನಡೆದ ವಾರ್ಷಿಕೋತ್ಸವದಲ್ಲಿ ಗಣಪತಿ ಹೋಮ, ಚಂಡಿಕಾ ಹೋಮ, ದುರ್ಗಾ ಪೂಜೆ, ಆಶ್ಲೇಷಾ ಬಲಿ, ನಾಗಹೋಮ ಸೇರಿದಂತೆ ವಿವಿಧ ಪೂಜಾ ಕಾರ್ಯಗಳೊಂದಿಗೆ ಸಂಭ್ರಮದಿಂದ ನಡೆಯಿತು.

ಈ ಬಾರಿ ಭಕ್ತರ ಹರಕೆಯ ಏಳು ವಸೂರಿ ಮಾಲ ಕೋಲವು ಕೊಡಗಿನ ಪುಣ್ಯ ನದಿ ಕಾವೇರಿಯಿಂದ ಹೊರಟು ಪಟ್ಟಣ ಪ್ರವೇಶಿಸುದಂತೆ ಸಾವಿರಾರು ಭಕ್ತರು ನಡು ರಾತ್ರಿಯಲ್ಲಿ ಬರಮಾಡಿಕೊಂಡರು.

ವರ್ಷಂಪ್ರತಿ ನಡೆಯುವ ಮುತ್ತಪ್ಪನ, ತಿರುವಪ್ಪ, ಶಾಸ್ತಪ್ಪ, ಗುಳಿಗ, ಭಗವತಿ, ವಿಷ್ಣುಮೂರ್ತಿ ಹಾಗೂ ವಸೂರಿ ಮಾಲ ತೆರೆಯನ್ನು ಭಕ್ತರು ಹರ್ಷೋದ್ಗಾರದೊಂದಿಗೆ ಕಣ್ತುಂಬಿಕೊಂಡರು.

ವಾರ್ಷಿಕೋತ್ಸವದ ಪ್ರಯುಕ್ತ ರಿಪ್ಲೇಕ್ಸನ್ ನೃತ್ಯಶಾಲೆ ನೆಲ್ಲಿಹುದಿಕೇರಿ ವಿದ್ಯಾರ್ಥಿಗಳು ನಡೆಸಿಕೊಟ್ಟ ಭರತನಾಟ್ಯ ಪ್ರದರ್ಶನ ಭಕ್ತರ ಗಮನ ಸೆಳೆಯಿತು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago