Operation to drive wild elephants into the forest successful
ಮೈಸೂರು: ವಿರಾಜಪೇಟೆ ವಿಭಾಗ, ತಿತಿಮತಿ ಉಪ ವಿಭಾಗ, ತಿತಿಮತಿ ವಲಯದ ಮಾಯಮುಡಿ, ದೇವರಪುರ ಮತ್ತು ತಿತಿಮತಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಖಾಸಗಿ ಜಮೀನುಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ಯಶಸ್ವಿಯಾಯಿತು.
ಈ ಕಾರ್ಯಾಚರಣೆಯಲ್ಲಿ ಅನನ್ಯ ಮತ್ತು NE-4 ಕಾಡಾನೆಗಳ ಗುಂಪು ಸೇರಿ ಒಟ್ಟು 18 ಕಾಡಾನೆಗಳನ್ನು ಯಶಸ್ವಿಯಾಗಿ ಕಾಡಿಗೆ ಅಟ್ಟಲಾಗಿದೆ.
ಮಾಯಮುಡಿ ಗ್ರಾಮದ ಅಂಬುಕೋಟೆಯಿಂದ ಅನನ್ಯ ಗುಂಪಿಗೆ ಸೇರಿದ 07 ಕಾಡಾನೆಗಳು ಹಾಗೂ ಮಾಯಮುಡಿ ಗ್ರಾಮ ಪಂಚಾಯಿತಿ ಬಳಿಯಿಂದ 02 ಗಂಡಾನೆಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಕಾಡಾನೆಗಳನ್ನು ದೇವಮಚ್ಚಿಯ ಬಳಿ ಮಾವುಕಲ್ ಮೀಸಲು ಅರಣ್ಯಕ್ಕೆ ಯಶಸ್ವಿಯಾಗಿ ಅಟ್ಟಲಾಗಿದೆ.
ಅರವತೊಕ್ಲು ಗ್ರಾಮದಲ್ಲಿ ಬೀಡುಬಿಟ್ಟಿದ್ದ NE-4 ಗುಂಪಿನ 09 ಕಾಡಾನೆಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಕಾಡಾನೆಗಳನ್ನು ನೊಖ್ಯಸಿದ್ದಾಪುರ ಗ್ರಾಮದ ಕುಂಜುರಾಮನ ಕಟ್ಟೆ ಬಳಿ ಅರಿಕೇರಿ ಮೀಸಲು ಅರಣ್ಯಕ್ಕೆ ಯಶಸ್ವಿಯಾಗಿ ಅಟ್ಟಲಾಗಿದೆ.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಸೂಚನೆ ಮೇರೆಗೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
ಹೊಸದಿಲ್ಲಿ : 77ನೇ ಗಣರಾಜ್ಯೋತ್ಸವದ ಅಂಗವಾಗಿ ದಿಲ್ಲಿಯ ಕರ್ತವ್ಯ ಪಥದಲ್ಲಿ ಭಾರತವು ಸಾಂಸ್ಕೃತಿಕ ವೈವಿಧ್ಯತೆಯೊಂದಿಗೆ ದೇಶದ ಸೇನಾ ಶಕ್ತಿ ಪ್ರದರ್ಶನ…
ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…
ಉಡುಪಿ : ಐಲ್ಯಾಂಡ್ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…
ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…
ಬೆಂಗಳೂರು : ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ನಗರದ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…