Operation to drive wild elephants into the forest successful
ಮೈಸೂರು: ವಿರಾಜಪೇಟೆ ವಿಭಾಗ, ತಿತಿಮತಿ ಉಪ ವಿಭಾಗ, ತಿತಿಮತಿ ವಲಯದ ಮಾಯಮುಡಿ, ದೇವರಪುರ ಮತ್ತು ತಿತಿಮತಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಖಾಸಗಿ ಜಮೀನುಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ಯಶಸ್ವಿಯಾಯಿತು.
ಈ ಕಾರ್ಯಾಚರಣೆಯಲ್ಲಿ ಅನನ್ಯ ಮತ್ತು NE-4 ಕಾಡಾನೆಗಳ ಗುಂಪು ಸೇರಿ ಒಟ್ಟು 18 ಕಾಡಾನೆಗಳನ್ನು ಯಶಸ್ವಿಯಾಗಿ ಕಾಡಿಗೆ ಅಟ್ಟಲಾಗಿದೆ.
ಮಾಯಮುಡಿ ಗ್ರಾಮದ ಅಂಬುಕೋಟೆಯಿಂದ ಅನನ್ಯ ಗುಂಪಿಗೆ ಸೇರಿದ 07 ಕಾಡಾನೆಗಳು ಹಾಗೂ ಮಾಯಮುಡಿ ಗ್ರಾಮ ಪಂಚಾಯಿತಿ ಬಳಿಯಿಂದ 02 ಗಂಡಾನೆಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಕಾಡಾನೆಗಳನ್ನು ದೇವಮಚ್ಚಿಯ ಬಳಿ ಮಾವುಕಲ್ ಮೀಸಲು ಅರಣ್ಯಕ್ಕೆ ಯಶಸ್ವಿಯಾಗಿ ಅಟ್ಟಲಾಗಿದೆ.
ಅರವತೊಕ್ಲು ಗ್ರಾಮದಲ್ಲಿ ಬೀಡುಬಿಟ್ಟಿದ್ದ NE-4 ಗುಂಪಿನ 09 ಕಾಡಾನೆಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಕಾಡಾನೆಗಳನ್ನು ನೊಖ್ಯಸಿದ್ದಾಪುರ ಗ್ರಾಮದ ಕುಂಜುರಾಮನ ಕಟ್ಟೆ ಬಳಿ ಅರಿಕೇರಿ ಮೀಸಲು ಅರಣ್ಯಕ್ಕೆ ಯಶಸ್ವಿಯಾಗಿ ಅಟ್ಟಲಾಗಿದೆ.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಸೂಚನೆ ಮೇರೆಗೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…