ಕೊಡಗು

ಕಾಡಿಗೆ ಕಾಡಾನೆಗಳನ್ನು ಅಟ್ಟುವ ಕಾರ್ಯಾಚರಣೆ ಯಶಸ್ವಿ

ಮೈಸೂರು: ವಿರಾಜಪೇಟೆ ವಿಭಾಗ, ತಿತಿಮತಿ ಉಪ ವಿಭಾಗ, ತಿತಿಮತಿ ವಲಯದ ಮಾಯಮುಡಿ, ದೇವರಪುರ ಮತ್ತು ತಿತಿಮತಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಖಾಸಗಿ ಜಮೀನುಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ಯಶಸ್ವಿಯಾಯಿತು.

ಈ ಕಾರ್ಯಾಚರಣೆಯಲ್ಲಿ ಅನನ್ಯ ಮತ್ತು NE-4 ಕಾಡಾನೆಗಳ ಗುಂಪು ಸೇರಿ ಒಟ್ಟು 18 ಕಾಡಾನೆಗಳನ್ನು ಯಶಸ್ವಿಯಾಗಿ ಕಾಡಿಗೆ ಅಟ್ಟಲಾಗಿದೆ.

ಮಾಯಮುಡಿ ಗ್ರಾಮದ ಅಂಬುಕೋಟೆಯಿಂದ ಅನನ್ಯ ಗುಂಪಿಗೆ ಸೇರಿದ 07 ಕಾಡಾನೆಗಳು ಹಾಗೂ ಮಾಯಮುಡಿ ಗ್ರಾಮ ಪಂಚಾಯಿತಿ ಬಳಿಯಿಂದ 02 ಗಂಡಾನೆಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಕಾಡಾನೆಗಳನ್ನು ದೇವಮಚ್ಚಿಯ ಬಳಿ ಮಾವುಕಲ್‌ ಮೀಸಲು ಅರಣ್ಯಕ್ಕೆ ಯಶಸ್ವಿಯಾಗಿ ಅಟ್ಟಲಾಗಿದೆ.

ಅರವತೊಕ್ಲು ಗ್ರಾಮದಲ್ಲಿ ಬೀಡುಬಿಟ್ಟಿದ್ದ NE-4 ಗುಂಪಿನ 09 ಕಾಡಾನೆಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಕಾಡಾನೆಗಳನ್ನು ನೊಖ್ಯಸಿದ್ದಾಪುರ ಗ್ರಾಮದ ಕುಂಜುರಾಮನ ಕಟ್ಟೆ ಬಳಿ ಅರಿಕೇರಿ ಮೀಸಲು ಅರಣ್ಯಕ್ಕೆ ಯಶಸ್ವಿಯಾಗಿ ಅಟ್ಟಲಾಗಿದೆ.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಸೂಚನೆ ಮೇರೆಗೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago