ಕೊಡಗು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಕೊಡಗು : ಅನುದಾನ ಹಂಚಿಕೆ ಸೇರಿದಂತೆ ಸರ್ಕಾರದಲ್ಲಿ ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಯುತ್ತಿದ್ದು, ಯಾರೋ ಒಂದಿಬ್ಬರು ಶಾಸಕರು ಹೇಳಿದ್ದನ್ನೇ ಸತ್ಯ ಎಂದು ಆರೋಪ ಮಾಡುತ್ತಿರುವ ಪ್ರತಿಪಕ್ಷಗಳಿಗೆ ಮಾಡಲು ಬೇರೆ ಕೆಲಸ ಇಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿಯೂ ಆಗಿರುವ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಹೇಳಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ವೇಳೆ ಹಾರಂಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನುದಾನ ಹಂಚಿಕೆ, ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಯಾರೋ ಒಂದಿಬ್ಬರು ಶಾಸಕರು ಮಾತನಾಡಿದ್ದಾರೆ. ಉಳಿದೆಲ್ಲಾ ಶಾಸಕರಿಗೆ ಯಾವುದೇ ಸಮಸ್ಯೆ ಆಗುತ್ತಿಲ್ಲ. ಹೀಗಿರುವಾಗ ಸರ್ಕಾರದ ಮೇಲೆ ವಿನಾ ಕಾರಣ ಆರೋಪ ಮಾಡಲಾಗುತ್ತಿದೆ. ಸರ್ಕಾರದಲ್ಲಿ ಸಾಕಷ್ಟು ಹಣ ಇದ್ದು, ಯೋಜನೆಗಳ ಅನುಷ್ಠಾನಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದರು.

ವಸತಿ ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಮಾಡಿದ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಚಿವರಿಂದ ಸಮಸ್ಯೆಯಾಗಿದೆ ಎಂದು ಅವರು ಹೇಳಿಲ್ಲ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಗುತ್ತಿರುವುದನ್ನು ಹೇಳಿದ್ದಾರೆ. ಮುಖ್ಯಮಂತ್ರಿಯವರು ಬಿ.ಆರ್.ಪಾಟೀಲ್ ಅವರನ್ನು ಕರೆಸಿ ಮಾತನಾಡಿದ್ದಾರೆ. ಸಮಸ್ಯೆ ಇತ್ಯರ್ಥವಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ನ ರಾಜು ಕಾಗೆ ಅವರ ಆರೋಪದ ಬಗ್ಗೆ ಮಾತನಾಡಿ, ರಾಜು ಕಾಗೆ ಅವರು ಭಾವನಾತ್ಮಕ ವ್ಯಕ್ತಿ. ಸ್ಥಳೀಯವಾಗಿ ಆಗಿರುವ ಸಮಸ್ಯೆಯನ್ನು ಅವರು ಹೇಳಿಕೊಂಡಿದ್ದಾರೆ. ರಾಜ್ಯಾದ್ಯಂತ ಎಲ್ಲಾ ಕಡೆ ಕೆಲಸ ಆಗುತ್ತಿದ್ದರೂ ಅವರ ಕ್ಷೇತ್ರದಲ್ಲಿ ಆಗುತ್ತಿಲ್ಲ ಎಂದಾದರೆ ಅದು ಅಧಿಕಾರಿಗಳ ಅಲಕ್ಷ್ಯದಿಂದ. ಈ ಬಗ್ಗೆಯೂ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಳನ್ನು ನೀಡಿದ್ದಾರೆ ಎಂದರು.

ಹಣದ ಕೊರತೆ ಇಲ್ಲ
ರಾಜ್ಯ ಸರ್ಕಾರದಲ್ಲಿ ಹಣದ ಕೊರತೆ ಇಲ್ಲ.ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ವಾರ್ಷಿಕ 90 ಸಾವಿರ ಕೋಟಿ ರೂ. ಸಬ್ಸಿಡಿ ಮೊತ್ತವನ್ನು ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳ ಖಾತೆಗೆ ಹಾಕಲಾಗುತ್ತಿದೆ. ಕ್ಷೇತ್ರಗಳ ಅಭಿವೃದ್ಧಿಗೆ ಎಂದು 8,000 ಕೋಟಿ ರೂ. ತೆಗೆದಿರಿಸಲಾಗಿದ್ದು, ಈಗಾಗಲೇ ಮಾರ್ಗಸೂಚಿಗಳನ್ನು ರಚಿಸಿ ಆ ಅನುದಾನವನ್ನು ಶಾಸಕರಿಗೆ ಹಂಚಿಕೆ ಮಾಡಲು ಸಿದ್ಧತೆ ನಡೆಯುತ್ತಿದೆ ಎಂದು ತಿಳಿಸಿದರು.

ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಸ್ವಾಮಿ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಈ ಭಾಗಕ್ಕೆ 483 ಕೋಟಿ ರೂಪಾಯಿಗಳ ಕಾಮಗಾರಿಗೆ ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಇದರಲ್ಲಿ 50 ಕೋಟಿ ರೂ. ಅನ್ನು ಕೊಡಗು ಜಿಲ್ಲೆಯ 2 ತಾಲೂಕುಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಕಾವೇರಿ ನೀರಾವರಿ ನಿಗಮದಿಂದ 150 ಕೋಟಿ ರೂ. ಅನುದಾನ ಬಂದಿದೆ. ಸರ್ಕಾರಿ ನೌಕರರಿಗೆ ಸಮರ್ಪಕವಾಗಿ ವೇತನ ನೀಡಲಾಗುತ್ತಿದೆ. ಬೊಕ್ಕಸದಲ್ಲಿ ಹಣ ಇಲ್ಲದಿದ್ದರೆ ಇವೆಲ್ಲವೂ ಸಾಧ್ಯವಾಗುತ್ತಿತ್ತೇ ಎಂದು ಪ್ರಶ್ನಿಸಿದರು.

ಪ್ರತಿಪಕ್ಷಗಳ ವಿರುದ್ಧ ಕಿಡಿ ಕಾರಿದ ಸಚಿವರು, ಅವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಚರ್ಚೆ ಮಡಲು ಬೇರೆ ವಿಷಯ ಲಭ್ಯವಾಗುತ್ತಿಲ್ಲ. ಹೀಗಾಗಿ ಸರ್ಕಾರದ ಬಗ್ಗೆ ಸುಖಾ ಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಆರೋಪಗಳಿಗೆ ಕೆಲಸದ ಮೂಲಕ ನಾವು ಉತ್ತರ ನೀಡುತ್ತಿದ್ದೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago