kodagu rain
ಮಡಿಕೇರಿ : ಕೊಡಗು ಜಿಲ್ಲೆಯ ವಿವಿಧೆಡೆ ಭಾನುವಾರ ಉತ್ತಮ ಮಳೆಯಾಗಿದ್ದು, ಹವಾಮಾನ ಇಲಾಖೆ ಆ.18ರವರೆಗೆ ಆರೆಂಜ್ ಅರ್ಲಟ್ ಘೋಷಣೆ ಮಾಡಿದೆ.
ಭಾನುವಾರ ಮಡಿಕೇರಿ ನಗರ ಸೇರಿದಂತೆ ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆ, ಕುಶಾಲನಗರ ತಾಲ್ಲೂಕಿನಾದ್ಯಮತ ಉತ್ತಮ ಮಳೆಯಾಗಿದೆ. ಮಲೆಯೊಂದಿಗೆ ಬಿರುಗಾಳಿಯೂ ಬೀಸುತ್ತಿದೆ. ಈ ಹಿನ್ನೆಲೆ ಯಲ್ಲಿ ಹವಾಮಾನ ಇಲಾಖೆ ಭಾನುವಾರ ಮತ್ತು ಸೋಮವಾರದಂದು ಆರೆಂಜ್ ಅರ್ಲಟ್ ಘೋಷಣೆ ಮಾಡಿದೆ.
ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ೮.೩೦ಕ್ಕೆ ಕೊನೆಗೊಂಡಂತೆ ಕಳೆದ ೨೪ ಗಂಟೆ ಗಳ ಅವಽಯಲ್ಲಿ ಸರಾಸರಿ ೪೪.೭೬ ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಸರಾಸರಿ ೫೩.೬೦ ಮಿ.ಮೀ, ವಿರಾಜಪೇಟೆ ತಾಲ್ಲೂಕಿನಲ್ಲಿ ಸರಾಸರಿ ೩೪.೬೦ ಮಿ.ಮೀ, ಪೊನ್ನಂಪೇಟೆ ತಾಲ್ಲೂಕಿನಲ್ಲಿ ಸರಾಸರಿ ೪೨.೨೫ ಮಿ.ಮೀ, ಸೋಮವಾರಪೇಟೆ ತಾಲ್ಲೂಕಿನಲ್ಲಿ ಸರಾಸರಿ ೬೭.೯೫ ಮಿ.ಮೀ, ಕುಶಾಲನಗರ ತಾಲ್ಲೂಕಿನಲ್ಲಿ ಸರಾಸರಿ ೨೫.೪೦ ಮಿ.ಮೀ. ಮಳೆಯಾಗಿದೆ.
ಜಿಲ್ಲೆಯ ಹೋಬಳಿವಾರುಗಳಾದ ಮಡಿಕೇರಿ ಕಸಬಾ ೫೫, ನಾಪೋಕ್ಲು ೪೧.೨, ಸಂಪಾಜೆ ೭೭, ಭಾಗಮಂಡಲ ೪೧, ವಿರಾಜಪೇಟೆ ೪೧.೨, ಅಮ್ಮತ್ತಿ ೨೮, ಹುದಿಕೇರಿ ೪೧.೯, ಶ್ರೀಮಂಗಲ ೮೩, ಪೊನ್ನಂಪೇಟೆ ೨೩, ಬಾಳೆಲೆ ೨೧.೦೯, ಸೋಮವಾರಪೇಟೆ ೩೮.೨, ಶನಿವಾರಸಂತೆ ೭೬, ಶಾಂತಳ್ಳಿ ೭೫, ಕೊಡ್ಲಿಪೇಟೆ ೮೨.೬, ಕುಶಾಲನಗರ ೧೬.೮, ಸುಂಟಿಕೊಪ್ಪ ೩೪ ಮಿ.ಮೀ. ಮಳೆಯಾಗಿದೆ.
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ ೨,೮೫೯ ಅಡಿಗಳಿದ್ದು, ೨,೮೫೭.೨೦ ಅಡಿ ನೀರು ಸಂಗ್ರಹವಾಗಿದೆ. ಇಂದಿನ ನೀರಿನ ಒಳಹರಿವು ೮,೭೨೮ ಕ್ಯುಸೆಕ್ಸ್ ಇದ್ದು, ಹೊರ ಹರಿವು ನದಿಗೆ ೭,೮೧೨ ಕ್ಯುಸೆಕ್ಸ್, ನಾಲೆಗೆ ೫೦೦ ಕ್ಯುಸೆಕ್ಸ್ ಬಿಡಲಾಗುತ್ತಿದೆ.
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…