ಕೊಡಗು

ಕೊಡಗಿನಲ್ಲಿ ಮಳೆ : ಆರೆಂಜ್‌ ಅರ್ಲಟ್‌ ಘೋಷಣೆ

ಮಡಿಕೇರಿ : ಕೊಡಗು ಜಿಲ್ಲೆಯ ವಿವಿಧೆಡೆ ಭಾನುವಾರ ಉತ್ತಮ ಮಳೆಯಾಗಿದ್ದು, ಹವಾಮಾನ ಇಲಾಖೆ ಆ.18ರವರೆಗೆ ಆರೆಂಜ್ ಅರ್ಲಟ್ ಘೋಷಣೆ ಮಾಡಿದೆ.

ಭಾನುವಾರ ಮಡಿಕೇರಿ ನಗರ ಸೇರಿದಂತೆ ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆ, ಕುಶಾಲನಗರ ತಾಲ್ಲೂಕಿನಾದ್ಯಮತ ಉತ್ತಮ ಮಳೆಯಾಗಿದೆ. ಮಲೆಯೊಂದಿಗೆ ಬಿರುಗಾಳಿಯೂ ಬೀಸುತ್ತಿದೆ. ಈ ಹಿನ್ನೆಲೆ ಯಲ್ಲಿ ಹವಾಮಾನ ಇಲಾಖೆ ಭಾನುವಾರ ಮತ್ತು ಸೋಮವಾರದಂದು ಆರೆಂಜ್ ಅರ್ಲಟ್ ಘೋಷಣೆ ಮಾಡಿದೆ.

ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ೮.೩೦ಕ್ಕೆ ಕೊನೆಗೊಂಡಂತೆ ಕಳೆದ ೨೪ ಗಂಟೆ ಗಳ ಅವಽಯಲ್ಲಿ ಸರಾಸರಿ ೪೪.೭೬ ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಸರಾಸರಿ ೫೩.೬೦ ಮಿ.ಮೀ, ವಿರಾಜಪೇಟೆ ತಾಲ್ಲೂಕಿನಲ್ಲಿ ಸರಾಸರಿ ೩೪.೬೦ ಮಿ.ಮೀ, ಪೊನ್ನಂಪೇಟೆ ತಾಲ್ಲೂಕಿನಲ್ಲಿ ಸರಾಸರಿ ೪೨.೨೫ ಮಿ.ಮೀ, ಸೋಮವಾರಪೇಟೆ ತಾಲ್ಲೂಕಿನಲ್ಲಿ ಸರಾಸರಿ ೬೭.೯೫ ಮಿ.ಮೀ, ಕುಶಾಲನಗರ ತಾಲ್ಲೂಕಿನಲ್ಲಿ ಸರಾಸರಿ ೨೫.೪೦ ಮಿ.ಮೀ. ಮಳೆಯಾಗಿದೆ.

ಜಿಲ್ಲೆಯ ಹೋಬಳಿವಾರುಗಳಾದ ಮಡಿಕೇರಿ ಕಸಬಾ ೫೫, ನಾಪೋಕ್ಲು ೪೧.೨, ಸಂಪಾಜೆ ೭೭, ಭಾಗಮಂಡಲ ೪೧, ವಿರಾಜಪೇಟೆ ೪೧.೨, ಅಮ್ಮತ್ತಿ ೨೮, ಹುದಿಕೇರಿ ೪೧.೯, ಶ್ರೀಮಂಗಲ ೮೩, ಪೊನ್ನಂಪೇಟೆ ೨೩, ಬಾಳೆಲೆ ೨೧.೦೯, ಸೋಮವಾರಪೇಟೆ ೩೮.೨, ಶನಿವಾರಸಂತೆ ೭೬, ಶಾಂತಳ್ಳಿ ೭೫, ಕೊಡ್ಲಿಪೇಟೆ ೮೨.೬, ಕುಶಾಲನಗರ ೧೬.೮, ಸುಂಟಿಕೊಪ್ಪ ೩೪ ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ ೨,೮೫೯ ಅಡಿಗಳಿದ್ದು, ೨,೮೫೭.೨೦ ಅಡಿ ನೀರು ಸಂಗ್ರಹವಾಗಿದೆ. ಇಂದಿನ ನೀರಿನ ಒಳಹರಿವು ೮,೭೨೮ ಕ್ಯುಸೆಕ್ಸ್ ಇದ್ದು, ಹೊರ ಹರಿವು ನದಿಗೆ ೭,೮೧೨ ಕ್ಯುಸೆಕ್ಸ್, ನಾಲೆಗೆ ೫೦೦ ಕ್ಯುಸೆಕ್ಸ್ ಬಿಡಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

7 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

9 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

10 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

12 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

17 hours ago