ಕೊಡಗು

ಕೊಡಗಿನಲ್ಲಿ ಮಳೆ : ಆರೆಂಜ್‌ ಅರ್ಲಟ್‌ ಘೋಷಣೆ

ಮಡಿಕೇರಿ : ಕೊಡಗು ಜಿಲ್ಲೆಯ ವಿವಿಧೆಡೆ ಭಾನುವಾರ ಉತ್ತಮ ಮಳೆಯಾಗಿದ್ದು, ಹವಾಮಾನ ಇಲಾಖೆ ಆ.18ರವರೆಗೆ ಆರೆಂಜ್ ಅರ್ಲಟ್ ಘೋಷಣೆ ಮಾಡಿದೆ.

ಭಾನುವಾರ ಮಡಿಕೇರಿ ನಗರ ಸೇರಿದಂತೆ ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆ, ಕುಶಾಲನಗರ ತಾಲ್ಲೂಕಿನಾದ್ಯಮತ ಉತ್ತಮ ಮಳೆಯಾಗಿದೆ. ಮಲೆಯೊಂದಿಗೆ ಬಿರುಗಾಳಿಯೂ ಬೀಸುತ್ತಿದೆ. ಈ ಹಿನ್ನೆಲೆ ಯಲ್ಲಿ ಹವಾಮಾನ ಇಲಾಖೆ ಭಾನುವಾರ ಮತ್ತು ಸೋಮವಾರದಂದು ಆರೆಂಜ್ ಅರ್ಲಟ್ ಘೋಷಣೆ ಮಾಡಿದೆ.

ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ೮.೩೦ಕ್ಕೆ ಕೊನೆಗೊಂಡಂತೆ ಕಳೆದ ೨೪ ಗಂಟೆ ಗಳ ಅವಽಯಲ್ಲಿ ಸರಾಸರಿ ೪೪.೭೬ ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಸರಾಸರಿ ೫೩.೬೦ ಮಿ.ಮೀ, ವಿರಾಜಪೇಟೆ ತಾಲ್ಲೂಕಿನಲ್ಲಿ ಸರಾಸರಿ ೩೪.೬೦ ಮಿ.ಮೀ, ಪೊನ್ನಂಪೇಟೆ ತಾಲ್ಲೂಕಿನಲ್ಲಿ ಸರಾಸರಿ ೪೨.೨೫ ಮಿ.ಮೀ, ಸೋಮವಾರಪೇಟೆ ತಾಲ್ಲೂಕಿನಲ್ಲಿ ಸರಾಸರಿ ೬೭.೯೫ ಮಿ.ಮೀ, ಕುಶಾಲನಗರ ತಾಲ್ಲೂಕಿನಲ್ಲಿ ಸರಾಸರಿ ೨೫.೪೦ ಮಿ.ಮೀ. ಮಳೆಯಾಗಿದೆ.

ಜಿಲ್ಲೆಯ ಹೋಬಳಿವಾರುಗಳಾದ ಮಡಿಕೇರಿ ಕಸಬಾ ೫೫, ನಾಪೋಕ್ಲು ೪೧.೨, ಸಂಪಾಜೆ ೭೭, ಭಾಗಮಂಡಲ ೪೧, ವಿರಾಜಪೇಟೆ ೪೧.೨, ಅಮ್ಮತ್ತಿ ೨೮, ಹುದಿಕೇರಿ ೪೧.೯, ಶ್ರೀಮಂಗಲ ೮೩, ಪೊನ್ನಂಪೇಟೆ ೨೩, ಬಾಳೆಲೆ ೨೧.೦೯, ಸೋಮವಾರಪೇಟೆ ೩೮.೨, ಶನಿವಾರಸಂತೆ ೭೬, ಶಾಂತಳ್ಳಿ ೭೫, ಕೊಡ್ಲಿಪೇಟೆ ೮೨.೬, ಕುಶಾಲನಗರ ೧೬.೮, ಸುಂಟಿಕೊಪ್ಪ ೩೪ ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ ೨,೮೫೯ ಅಡಿಗಳಿದ್ದು, ೨,೮೫೭.೨೦ ಅಡಿ ನೀರು ಸಂಗ್ರಹವಾಗಿದೆ. ಇಂದಿನ ನೀರಿನ ಒಳಹರಿವು ೮,೭೨೮ ಕ್ಯುಸೆಕ್ಸ್ ಇದ್ದು, ಹೊರ ಹರಿವು ನದಿಗೆ ೭,೮೧೨ ಕ್ಯುಸೆಕ್ಸ್, ನಾಲೆಗೆ ೫೦೦ ಕ್ಯುಸೆಕ್ಸ್ ಬಿಡಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

5 mins ago

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ…

43 mins ago

ವೆನಿಜುವೆಲಾ ದೇಶದಲ್ಲಿ ಕಂಡು ಕೇಳರಿಯದ ಭೀಕರ ಭೂಕಂಪ

ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…

2 hours ago

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…

5 hours ago

ಸಮ ಸಮಾಜದ ಕನಸು ಕಂಡಿದ್ದ ಹೋರಾಟಗಾರ ಜವರಪ್ಪಗೌಡ

ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 25  ಗುರುವಾರ  

7 hours ago