Orange alert declared in Kodagu district
ಮಡಿಕೇರಿ: ಜಿಲ್ಲೆಯಲ್ಲಿ ಸಾಧಾರಣ ಮಳೆ ಮುಂದುವರೆದಿದ್ದು, ಗುರುವಾರದ(ಜು.17)ವರೆಗೆ ಹವಮಾನ ಇಲಾಖೆ ಆರೆಂಜ್ ಅರ್ಲಟ್ ಘೋಷಣೆ ಮಾಡಿದೆ.
ಬುಧವಾರ ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ನಾಪೋಕ್ಲು, ಸೋಮವಾರಪೇಟೆ ವ್ಯಾಪ್ತಿಯಲ್ಲಿ ಸಾಧಾರಣ ಮಳೆ ಮುಂದುವರೆದಿದೆ. ಜಿಲ್ಲೆಯಲ್ಲಿ ಬುಧವಾರ ವಾರ ಬೆಳಗ್ಗೆ 8:30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 13.88 ಮಿ.ಮೀ. ಮಳೆಯಾಗಿದೆ.
ಮಡಿಕೇರಿ ತಾಲೂಕಿನಲ್ಲಿ ಸರಾಸರಿ 36.03 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ ಸರಾಸರಿ 7.15 ಮಿ.ಮೀ, ಪೊನ್ನಂಪೇಟೆ ತಾಲೂಕಿನಲ್ಲಿ ಸರಾಸರಿ 6.75 ಮಿ.ಮೀ, ಸೋಮವಾರಪೇಟೆ ತಾಲೂಕಿನಲ್ಲಿ ಸರಾಸರಿ 13.85 ಮಿ.ಮೀ, ಕುಶಾಲನಗರ ತಾಲೂಕಿನಲ್ಲಿ ಸರಾಸರಿ 3.60 ಮಿ.ಮೀ ಮಳೆಯಾಗಿದೆ.
ಜಿಲ್ಲೆಯ ಹೋಬಳಿವಾರುಗಳಾದ ಮಡಿಕೇರಿ ಕಸಬಾ 31, ನಾಪೋಕ್ಲು 22.2 ಸಂಪಾಜೆ 47.5, ಭಾಗಮಂಡಲ 43.4, ವಿರಾಜಪೇಟೆ 6.8, ಅಮ್ಮತ್ತಿ 7.50, ಹುದಿಕೇರಿ 16, ಶ್ರೀಮಂಗಲ 6, ಪೊನ್ನಂಪೇಟೆ 3, ಬಾಳೆಲೆ 2, ಸೋಮವಾರಪೇಟೆ 14.4, ಶನಿವಾರಸಂತೆ 18, ಶಾಂತಳ್ಳಿ 28, ಕೊಡ್ಲಿಪೇಟೆ 6, ಕುಶಾಲನಗರ 0.2, ಸುಂಟಿಕೊಪ್ಪ 7 ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2.859 ಅಡಿಗಳಿದ್ದು, 2855.73 ಅಡಿ ನೀರು ಸಂಗ್ರಹವಾಗಿದೆ. ಇಂದಿನ ನೀರಿನ ಒಳಹರಿವು 5155 ಕ್ಯುಸೆಕ್ಇದ್ದು, ನೀರಿನ ಹೊರ ಹರಿವು ನದಿಗೆ 1958 ಕ್ಯುಸೆಕ್ ಇದೆ.
ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…