Orange alert declared in Kodagu district
ಮಡಿಕೇರಿ: ಜಿಲ್ಲೆಯಲ್ಲಿ ಸಾಧಾರಣ ಮಳೆ ಮುಂದುವರೆದಿದ್ದು, ಗುರುವಾರದ(ಜು.17)ವರೆಗೆ ಹವಮಾನ ಇಲಾಖೆ ಆರೆಂಜ್ ಅರ್ಲಟ್ ಘೋಷಣೆ ಮಾಡಿದೆ.
ಬುಧವಾರ ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ನಾಪೋಕ್ಲು, ಸೋಮವಾರಪೇಟೆ ವ್ಯಾಪ್ತಿಯಲ್ಲಿ ಸಾಧಾರಣ ಮಳೆ ಮುಂದುವರೆದಿದೆ. ಜಿಲ್ಲೆಯಲ್ಲಿ ಬುಧವಾರ ವಾರ ಬೆಳಗ್ಗೆ 8:30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 13.88 ಮಿ.ಮೀ. ಮಳೆಯಾಗಿದೆ.
ಮಡಿಕೇರಿ ತಾಲೂಕಿನಲ್ಲಿ ಸರಾಸರಿ 36.03 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ ಸರಾಸರಿ 7.15 ಮಿ.ಮೀ, ಪೊನ್ನಂಪೇಟೆ ತಾಲೂಕಿನಲ್ಲಿ ಸರಾಸರಿ 6.75 ಮಿ.ಮೀ, ಸೋಮವಾರಪೇಟೆ ತಾಲೂಕಿನಲ್ಲಿ ಸರಾಸರಿ 13.85 ಮಿ.ಮೀ, ಕುಶಾಲನಗರ ತಾಲೂಕಿನಲ್ಲಿ ಸರಾಸರಿ 3.60 ಮಿ.ಮೀ ಮಳೆಯಾಗಿದೆ.
ಜಿಲ್ಲೆಯ ಹೋಬಳಿವಾರುಗಳಾದ ಮಡಿಕೇರಿ ಕಸಬಾ 31, ನಾಪೋಕ್ಲು 22.2 ಸಂಪಾಜೆ 47.5, ಭಾಗಮಂಡಲ 43.4, ವಿರಾಜಪೇಟೆ 6.8, ಅಮ್ಮತ್ತಿ 7.50, ಹುದಿಕೇರಿ 16, ಶ್ರೀಮಂಗಲ 6, ಪೊನ್ನಂಪೇಟೆ 3, ಬಾಳೆಲೆ 2, ಸೋಮವಾರಪೇಟೆ 14.4, ಶನಿವಾರಸಂತೆ 18, ಶಾಂತಳ್ಳಿ 28, ಕೊಡ್ಲಿಪೇಟೆ 6, ಕುಶಾಲನಗರ 0.2, ಸುಂಟಿಕೊಪ್ಪ 7 ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2.859 ಅಡಿಗಳಿದ್ದು, 2855.73 ಅಡಿ ನೀರು ಸಂಗ್ರಹವಾಗಿದೆ. ಇಂದಿನ ನೀರಿನ ಒಳಹರಿವು 5155 ಕ್ಯುಸೆಕ್ಇದ್ದು, ನೀರಿನ ಹೊರ ಹರಿವು ನದಿಗೆ 1958 ಕ್ಯುಸೆಕ್ ಇದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…