ಕೊಡಗು: ಸಂಸದ ಯದುವೀರ್ ಕೃಷ್ಣದತತ ಚಾಮರಾಜ ಒಡೆಯರ್ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್ಪೋರ್ಟ್ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ ಪಾಸ್ಪೋರ್ಟ್ ಕಚೇರಿ ನಿರ್ಧಾರ ಮಾಡಿದೆ.
ಏಪ್ರಿಲ್.8ರಿಂದ ಮೂರು ದಿನಗಳ ಕಾಲ ಕೊಡಗು ಜಿಲ್ಲೆಯಲ್ಲಿ ಪಾಸ್ಪೋರ್ಟ್ ಮೇಳ ನಡೆಯಲಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಯದುವೀರ್ ಒಡೆಯರ್ ಅವರು ಕೊಡಗು ಜಿಲ್ಲೆಯಲ್ಲಿ ಪಾಸ್ಪೋರ್ಟ್ ಮೇಳ ಆಯೋಜಿಸುವಂತೆ ಮನವಿ ಮಾಡಿದ್ದರು.
ಇದಕ್ಕೆ ಸ್ಪಂದಿಸಿದ ಬೆಂಗಳೂರು ರೀಜನಲ್ ಪಾಸ್ಪೋರ್ಟ್ ಅಧಿಕಾರಿಗಳು ಸಂಸದರಿಗೆ ಪತ್ರ ಬರೆದಿದ್ದು, ಏಪ್ರಿಲ್ 8, 9, 10ರಂದು ಮೇಳ ಆಯೋಜಿಸಲಾಗುವುದು ಎಂದು ಹೇಳಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಂಸದ ಯದುವೀರ್ ಒಡೆಯರ್ ಅವರು, ಕೊಡಗು ಜಿಲ್ಲೆಯ ಹಲವಾರು ಮಂದಿ ಪಾಸ್ಪೋರ್ಟ್ ಬೇಕು ಎಂದು ಮನವಿ ಸಲ್ಲಿಸಿದ್ದರು. ಕೆಲವರು ಮೈಸೂರಿಗೆ ಅಥವಾ ಬೆಂಗಳೂರಿಗೆ ತೆರಳಬೇಕು. ಇದು ಹಿರಿಯ ನಾಗರಿಕರಿಗೆ ತೊಂದರೆ ಆಗುತ್ತದೆ ಎಂದು ಮನವಿಯಲ್ಲಿ ವಿವರಿಸಿದ್ದರು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ನಿರ್ಧರಿಸಿದೆ ಎಂದು ಹೇಳಿದರು.
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…