ಕೊಡಗು: ಸಂಸದ ಯದುವೀರ್ ಕೃಷ್ಣದತತ ಚಾಮರಾಜ ಒಡೆಯರ್ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್ಪೋರ್ಟ್ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ ಪಾಸ್ಪೋರ್ಟ್ ಕಚೇರಿ ನಿರ್ಧಾರ ಮಾಡಿದೆ.
ಏಪ್ರಿಲ್.8ರಿಂದ ಮೂರು ದಿನಗಳ ಕಾಲ ಕೊಡಗು ಜಿಲ್ಲೆಯಲ್ಲಿ ಪಾಸ್ಪೋರ್ಟ್ ಮೇಳ ನಡೆಯಲಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಯದುವೀರ್ ಒಡೆಯರ್ ಅವರು ಕೊಡಗು ಜಿಲ್ಲೆಯಲ್ಲಿ ಪಾಸ್ಪೋರ್ಟ್ ಮೇಳ ಆಯೋಜಿಸುವಂತೆ ಮನವಿ ಮಾಡಿದ್ದರು.
ಇದಕ್ಕೆ ಸ್ಪಂದಿಸಿದ ಬೆಂಗಳೂರು ರೀಜನಲ್ ಪಾಸ್ಪೋರ್ಟ್ ಅಧಿಕಾರಿಗಳು ಸಂಸದರಿಗೆ ಪತ್ರ ಬರೆದಿದ್ದು, ಏಪ್ರಿಲ್ 8, 9, 10ರಂದು ಮೇಳ ಆಯೋಜಿಸಲಾಗುವುದು ಎಂದು ಹೇಳಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಂಸದ ಯದುವೀರ್ ಒಡೆಯರ್ ಅವರು, ಕೊಡಗು ಜಿಲ್ಲೆಯ ಹಲವಾರು ಮಂದಿ ಪಾಸ್ಪೋರ್ಟ್ ಬೇಕು ಎಂದು ಮನವಿ ಸಲ್ಲಿಸಿದ್ದರು. ಕೆಲವರು ಮೈಸೂರಿಗೆ ಅಥವಾ ಬೆಂಗಳೂರಿಗೆ ತೆರಳಬೇಕು. ಇದು ಹಿರಿಯ ನಾಗರಿಕರಿಗೆ ತೊಂದರೆ ಆಗುತ್ತದೆ ಎಂದು ಮನವಿಯಲ್ಲಿ ವಿವರಿಸಿದ್ದರು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ನಿರ್ಧರಿಸಿದೆ ಎಂದು ಹೇಳಿದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…