ಕೊಡಗು

ಕಾಳು ಮೆಣಸು ಕಳ್ಳತನ; ಆರೋಪಿಗಳ ಬಂಧನ

ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ

ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು ಕಳ್ಳತನವೆಸಗಿ ಅಂತರ್ ರಾಜ್ಯದಲ್ಲಿ ಮಾರಾಟ ಮಾಡಿದ್ದ ಮೂವರು ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ತಿತಿಮತಿ ನೋಕ್ಯ ಗ್ರಾಮದ ನಿವಾಸಿ ಮತ್ತು ಹಾಲಿ ೧ನೇ ಪೆರುಂಬಾಡಿ ಆರ್ಜಿ ಗ್ರಾಮದಲ್ಲಿ ವಾಸವಿದ್ದ ಶಫೀಕ್ ಕೆ.ಬಿ.(೨೮), ೧ನೇ ಪೆರುಂಬಾಡಿ ಆರ್ಜಿ ಗ್ರಾಮದ ನಿವಾಸಿ ದರ್ಶನ್ ನಾಯಕ್(೨೫), ಮೈಸೂರು ನಗರದ ಉದಯಗಿರಿ ಗೌಸಿಯಾ ನಗರ ನಿವಾಸಿ ಮೊಹಮ್ಮದ್ ಶಾಕಿರ್(೩೧) ಬಂಧಿತ ಆರೋಪಿಗಳು.

ವಿರಾಜಪೇಟೆ ತಾಲೂಕು ಅಮ್ಮತ್ತಿ ಕಣ್ಣಂಗಾಲ ಗ್ರಾಮದ ನಿವಾಸಿ ಲೆಹರ್ ಗಣಪತಿ ಎಂಬುವವರು ಕಾಫಿ ಕಣದಲ್ಲಿ ಸುಮಾರು ೩೦೦ ಕೆ.ಜಿ. ಕಾಳು ಮೆಣಸು ದಾಸ್ತಾನು ಇರಿಸಿದ್ದರು. ಕಳೆದ ಮಾರ್ಚ್ ೯ರಂದು ಕಾಣದಲ್ಲಿದ್ದ ಕರಿಮೆಣಸು ಕಳವು ಮಾಡಲಾಗಿತ್ತು. ಕಾರ್ಮಿಕರನ್ನು ವಿಚಾರಿಸಿದರೂ ಪ್ರಯೋಜನವಾಗಿರಲಿಲ್ಲ. ಈ ಹಿನ್ನೆಲೆ ವಿರಾಜಪೇಟೆ ಗ್ರಾಮಾಂತರ ಠಾಣೆಗೆ ದೂರು ನೀಡಿದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿ ವಿಶೇಷ ತಂಡ ರಚನೆ ಮಾಡಿ ತನಿಖೆ ಕೈಗೊಂಡಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಆರೋಪಿಗಳ ಚಹರೆ ಪಟ್ಟಿ ಮತು ಇತರ ಚಲನವಲನಗಳನ್ನು ಗಮನಿಸಿದ ಪೊಲೀಸರು ಹುಣಸೂರು ತಾಲೂಕು ಪಂಚವಳ್ಳಿಯಲ್ಲಿ ಕಾರು ಒಂದಲ್ಲಿ ಕುಳಿತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ತನಿಖೆಗೆ ಒಳಪಡಿಸಿದ್ದಾರೆ. ತನಿಖೆ ವೇಳೆಯಲ್ಲಿ ಆರೋಪಿಗಳು ಕಳ್ಳತನ ಮಾಡಿದ್ದ ಕಾಳು ಮೆಣಸನ್ನು ಸ್ಥಳೀಯವಾಗಿ ಮಾರಾಟ ಮಾಡಿದಲ್ಲಿ ಕಳ್ಳ ಮಾಲು ಎಂದು ಗುರುತು ಮಾಡಬಹುದು ಎಂದು ಕೇರಳ ರಾಜ್ಯದಲ್ಲಿ ಮಾರಾಟ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.

೨೧೫ ಕೆ.ಜಿ ಕರಿಮೆಣಸು ಅಂದಾಜು ಮೌಲ್ಯ ೧,೪೭,೨೭೫ ರೂ., ಕೃತ್ಯಕ್ಕೆ ಬಳಸಿದ್ದ ಅಲ್ಟೋ ಕಾರು, ಹೋಂಡಾ ಯುನಿಕಾರ್ನ್, ಬೈಕ್ ವಶಕ್ಕೆ ಪಡೆದಿದ್ದಾರೆ. ಅರೋಪಿಗಳನ್ನು ಹೆಚ್ಚಿನ ತನಿಖೆ ಮಾಡಿದ ವೇಳೆಯಲ್ಲಿ ಆರೋಪಿಗಳ ಮೇಲೆ ಹುಣಸೂರು ನಗರ ಠಾಣೆಯಲ್ಲಿ ಪಲ್ಸರ್ ೨೦೦ ಎನ್.ಎಸ್ ಬೈಕ್ ಕಳ್ಳತನ ಪ್ರಕರಣ ದಾಖಲಾಗಿದ್ದು, ಬೈಕ್ ವಶಕ್ಕೆ ಪಡೆದಿದಾರೆ. ಸುಂಠಿಕೊಪ್ಪ ಠಾಣೆಯಲ್ಲಿ ೭೫ ಕೆ.ಜಿ ಕಾಳು ಮೆಣಸು ಕಳ್ಳತನ ಅಂದಾಜು ಮೌಲ್ಯ ೫೧,೩೭೫ ರೂ, ಮತ್ತು ಸ್ವಿಪ್ಟ್ ಡಿಸೈರ್ ಕಾರು ಕಳ್ಳತನ ಪ್ರಕರಣ ದಾಖಲಾಗಿದ್ದು, ಬಂಧಿತರಿಂದ ಕಳ್ಳತನದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಕೊಡಗು ಜಿಲ್ಲಾ ಪೊಲೀಸು ವರಿಷ್ಠಾಧಿಕಾರಿಗಳಾದ ಬಿಂದುಮಣಿ ಅವರ ಆದೇಶದ ಮೇರೆಗೆ ವಿರಾಜಪೇಟೆ ಉಪ ವಿಭಾಗ ಡಿವೈಎಸ್ಪಿ ಮಹೇಶ್ ಕುಮಾರ್ ಮತ್ತು ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಪಿ. ಮಾರ್ಗದರ್ಶನದಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸು ಠಾಣೆಯ ಠಾಣಾಧಿಕಾರಿ ಎನ್.ಜೆ. ಲತಾ, ಅಪರಾಧ ವಿಭಾಗ ಪಿ.ಎಸ್.ಐ. ವಾಣಿಶ್ರೀ ಮತ್ತು ಸಿಬ್ಬಂದಿಗಳಾದ ನವೀನ್, ಮಜೀದ್, ಅನೀಫ್, ಬಸವರಾಜು, ಶಿವರಾಜು, ಮಹೇಶ್ ಎಸ್, ರಾಜೇಶ್, ರಾಘವೇಂದ್ರ, ಶ್ರೀಪ್ರಸಾದ್ ಶಶಿಧರ, ಮಹೇಶ್ ಸಾರವಾಡ ಮತ್ತು ಗಿರೀಶ್ ಅವರು ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

3 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

4 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

5 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

5 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

6 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

6 hours ago