ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ
ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು ಕಳ್ಳತನವೆಸಗಿ ಅಂತರ್ ರಾಜ್ಯದಲ್ಲಿ ಮಾರಾಟ ಮಾಡಿದ್ದ ಮೂವರು ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ತಿತಿಮತಿ ನೋಕ್ಯ ಗ್ರಾಮದ ನಿವಾಸಿ ಮತ್ತು ಹಾಲಿ ೧ನೇ ಪೆರುಂಬಾಡಿ ಆರ್ಜಿ ಗ್ರಾಮದಲ್ಲಿ ವಾಸವಿದ್ದ ಶಫೀಕ್ ಕೆ.ಬಿ.(೨೮), ೧ನೇ ಪೆರುಂಬಾಡಿ ಆರ್ಜಿ ಗ್ರಾಮದ ನಿವಾಸಿ ದರ್ಶನ್ ನಾಯಕ್(೨೫), ಮೈಸೂರು ನಗರದ ಉದಯಗಿರಿ ಗೌಸಿಯಾ ನಗರ ನಿವಾಸಿ ಮೊಹಮ್ಮದ್ ಶಾಕಿರ್(೩೧) ಬಂಧಿತ ಆರೋಪಿಗಳು.
ವಿರಾಜಪೇಟೆ ತಾಲೂಕು ಅಮ್ಮತ್ತಿ ಕಣ್ಣಂಗಾಲ ಗ್ರಾಮದ ನಿವಾಸಿ ಲೆಹರ್ ಗಣಪತಿ ಎಂಬುವವರು ಕಾಫಿ ಕಣದಲ್ಲಿ ಸುಮಾರು ೩೦೦ ಕೆ.ಜಿ. ಕಾಳು ಮೆಣಸು ದಾಸ್ತಾನು ಇರಿಸಿದ್ದರು. ಕಳೆದ ಮಾರ್ಚ್ ೯ರಂದು ಕಾಣದಲ್ಲಿದ್ದ ಕರಿಮೆಣಸು ಕಳವು ಮಾಡಲಾಗಿತ್ತು. ಕಾರ್ಮಿಕರನ್ನು ವಿಚಾರಿಸಿದರೂ ಪ್ರಯೋಜನವಾಗಿರಲಿಲ್ಲ. ಈ ಹಿನ್ನೆಲೆ ವಿರಾಜಪೇಟೆ ಗ್ರಾಮಾಂತರ ಠಾಣೆಗೆ ದೂರು ನೀಡಿದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿ ವಿಶೇಷ ತಂಡ ರಚನೆ ಮಾಡಿ ತನಿಖೆ ಕೈಗೊಂಡಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಆರೋಪಿಗಳ ಚಹರೆ ಪಟ್ಟಿ ಮತು ಇತರ ಚಲನವಲನಗಳನ್ನು ಗಮನಿಸಿದ ಪೊಲೀಸರು ಹುಣಸೂರು ತಾಲೂಕು ಪಂಚವಳ್ಳಿಯಲ್ಲಿ ಕಾರು ಒಂದಲ್ಲಿ ಕುಳಿತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ತನಿಖೆಗೆ ಒಳಪಡಿಸಿದ್ದಾರೆ. ತನಿಖೆ ವೇಳೆಯಲ್ಲಿ ಆರೋಪಿಗಳು ಕಳ್ಳತನ ಮಾಡಿದ್ದ ಕಾಳು ಮೆಣಸನ್ನು ಸ್ಥಳೀಯವಾಗಿ ಮಾರಾಟ ಮಾಡಿದಲ್ಲಿ ಕಳ್ಳ ಮಾಲು ಎಂದು ಗುರುತು ಮಾಡಬಹುದು ಎಂದು ಕೇರಳ ರಾಜ್ಯದಲ್ಲಿ ಮಾರಾಟ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.
೨೧೫ ಕೆ.ಜಿ ಕರಿಮೆಣಸು ಅಂದಾಜು ಮೌಲ್ಯ ೧,೪೭,೨೭೫ ರೂ., ಕೃತ್ಯಕ್ಕೆ ಬಳಸಿದ್ದ ಅಲ್ಟೋ ಕಾರು, ಹೋಂಡಾ ಯುನಿಕಾರ್ನ್, ಬೈಕ್ ವಶಕ್ಕೆ ಪಡೆದಿದ್ದಾರೆ. ಅರೋಪಿಗಳನ್ನು ಹೆಚ್ಚಿನ ತನಿಖೆ ಮಾಡಿದ ವೇಳೆಯಲ್ಲಿ ಆರೋಪಿಗಳ ಮೇಲೆ ಹುಣಸೂರು ನಗರ ಠಾಣೆಯಲ್ಲಿ ಪಲ್ಸರ್ ೨೦೦ ಎನ್.ಎಸ್ ಬೈಕ್ ಕಳ್ಳತನ ಪ್ರಕರಣ ದಾಖಲಾಗಿದ್ದು, ಬೈಕ್ ವಶಕ್ಕೆ ಪಡೆದಿದಾರೆ. ಸುಂಠಿಕೊಪ್ಪ ಠಾಣೆಯಲ್ಲಿ ೭೫ ಕೆ.ಜಿ ಕಾಳು ಮೆಣಸು ಕಳ್ಳತನ ಅಂದಾಜು ಮೌಲ್ಯ ೫೧,೩೭೫ ರೂ, ಮತ್ತು ಸ್ವಿಪ್ಟ್ ಡಿಸೈರ್ ಕಾರು ಕಳ್ಳತನ ಪ್ರಕರಣ ದಾಖಲಾಗಿದ್ದು, ಬಂಧಿತರಿಂದ ಕಳ್ಳತನದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕೊಡಗು ಜಿಲ್ಲಾ ಪೊಲೀಸು ವರಿಷ್ಠಾಧಿಕಾರಿಗಳಾದ ಬಿಂದುಮಣಿ ಅವರ ಆದೇಶದ ಮೇರೆಗೆ ವಿರಾಜಪೇಟೆ ಉಪ ವಿಭಾಗ ಡಿವೈಎಸ್ಪಿ ಮಹೇಶ್ ಕುಮಾರ್ ಮತ್ತು ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಪಿ. ಮಾರ್ಗದರ್ಶನದಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸು ಠಾಣೆಯ ಠಾಣಾಧಿಕಾರಿ ಎನ್.ಜೆ. ಲತಾ, ಅಪರಾಧ ವಿಭಾಗ ಪಿ.ಎಸ್.ಐ. ವಾಣಿಶ್ರೀ ಮತ್ತು ಸಿಬ್ಬಂದಿಗಳಾದ ನವೀನ್, ಮಜೀದ್, ಅನೀಫ್, ಬಸವರಾಜು, ಶಿವರಾಜು, ಮಹೇಶ್ ಎಸ್, ರಾಜೇಶ್, ರಾಘವೇಂದ್ರ, ಶ್ರೀಪ್ರಸಾದ್ ಶಶಿಧರ, ಮಹೇಶ್ ಸಾರವಾಡ ಮತ್ತು ಗಿರೀಶ್ ಅವರು ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
ಎಚ್.ಎಸ್.ದಿನೇಶ್ ಕುಮಾರ್ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…
ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಕಡೆಗೆ ವಾಲುವ ಆತಂಕ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಯಡಿಯೂರಪ್ಪ ಚಿಂತೆಯಲ್ಲಿದ್ದಾರೆ. ಅವರ ಚಿಂತೆಗೆ ಕಾರಣ…
ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…
ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…