ಕೊಡಗು

ಕಾಳು ಮೆಣಸು ಕಳ್ಳತನ; ಆರೋಪಿಗಳ ಬಂಧನ

ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ

ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು ಕಳ್ಳತನವೆಸಗಿ ಅಂತರ್ ರಾಜ್ಯದಲ್ಲಿ ಮಾರಾಟ ಮಾಡಿದ್ದ ಮೂವರು ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ತಿತಿಮತಿ ನೋಕ್ಯ ಗ್ರಾಮದ ನಿವಾಸಿ ಮತ್ತು ಹಾಲಿ ೧ನೇ ಪೆರುಂಬಾಡಿ ಆರ್ಜಿ ಗ್ರಾಮದಲ್ಲಿ ವಾಸವಿದ್ದ ಶಫೀಕ್ ಕೆ.ಬಿ.(೨೮), ೧ನೇ ಪೆರುಂಬಾಡಿ ಆರ್ಜಿ ಗ್ರಾಮದ ನಿವಾಸಿ ದರ್ಶನ್ ನಾಯಕ್(೨೫), ಮೈಸೂರು ನಗರದ ಉದಯಗಿರಿ ಗೌಸಿಯಾ ನಗರ ನಿವಾಸಿ ಮೊಹಮ್ಮದ್ ಶಾಕಿರ್(೩೧) ಬಂಧಿತ ಆರೋಪಿಗಳು.

ವಿರಾಜಪೇಟೆ ತಾಲೂಕು ಅಮ್ಮತ್ತಿ ಕಣ್ಣಂಗಾಲ ಗ್ರಾಮದ ನಿವಾಸಿ ಲೆಹರ್ ಗಣಪತಿ ಎಂಬುವವರು ಕಾಫಿ ಕಣದಲ್ಲಿ ಸುಮಾರು ೩೦೦ ಕೆ.ಜಿ. ಕಾಳು ಮೆಣಸು ದಾಸ್ತಾನು ಇರಿಸಿದ್ದರು. ಕಳೆದ ಮಾರ್ಚ್ ೯ರಂದು ಕಾಣದಲ್ಲಿದ್ದ ಕರಿಮೆಣಸು ಕಳವು ಮಾಡಲಾಗಿತ್ತು. ಕಾರ್ಮಿಕರನ್ನು ವಿಚಾರಿಸಿದರೂ ಪ್ರಯೋಜನವಾಗಿರಲಿಲ್ಲ. ಈ ಹಿನ್ನೆಲೆ ವಿರಾಜಪೇಟೆ ಗ್ರಾಮಾಂತರ ಠಾಣೆಗೆ ದೂರು ನೀಡಿದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿ ವಿಶೇಷ ತಂಡ ರಚನೆ ಮಾಡಿ ತನಿಖೆ ಕೈಗೊಂಡಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಆರೋಪಿಗಳ ಚಹರೆ ಪಟ್ಟಿ ಮತು ಇತರ ಚಲನವಲನಗಳನ್ನು ಗಮನಿಸಿದ ಪೊಲೀಸರು ಹುಣಸೂರು ತಾಲೂಕು ಪಂಚವಳ್ಳಿಯಲ್ಲಿ ಕಾರು ಒಂದಲ್ಲಿ ಕುಳಿತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ತನಿಖೆಗೆ ಒಳಪಡಿಸಿದ್ದಾರೆ. ತನಿಖೆ ವೇಳೆಯಲ್ಲಿ ಆರೋಪಿಗಳು ಕಳ್ಳತನ ಮಾಡಿದ್ದ ಕಾಳು ಮೆಣಸನ್ನು ಸ್ಥಳೀಯವಾಗಿ ಮಾರಾಟ ಮಾಡಿದಲ್ಲಿ ಕಳ್ಳ ಮಾಲು ಎಂದು ಗುರುತು ಮಾಡಬಹುದು ಎಂದು ಕೇರಳ ರಾಜ್ಯದಲ್ಲಿ ಮಾರಾಟ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.

೨೧೫ ಕೆ.ಜಿ ಕರಿಮೆಣಸು ಅಂದಾಜು ಮೌಲ್ಯ ೧,೪೭,೨೭೫ ರೂ., ಕೃತ್ಯಕ್ಕೆ ಬಳಸಿದ್ದ ಅಲ್ಟೋ ಕಾರು, ಹೋಂಡಾ ಯುನಿಕಾರ್ನ್, ಬೈಕ್ ವಶಕ್ಕೆ ಪಡೆದಿದ್ದಾರೆ. ಅರೋಪಿಗಳನ್ನು ಹೆಚ್ಚಿನ ತನಿಖೆ ಮಾಡಿದ ವೇಳೆಯಲ್ಲಿ ಆರೋಪಿಗಳ ಮೇಲೆ ಹುಣಸೂರು ನಗರ ಠಾಣೆಯಲ್ಲಿ ಪಲ್ಸರ್ ೨೦೦ ಎನ್.ಎಸ್ ಬೈಕ್ ಕಳ್ಳತನ ಪ್ರಕರಣ ದಾಖಲಾಗಿದ್ದು, ಬೈಕ್ ವಶಕ್ಕೆ ಪಡೆದಿದಾರೆ. ಸುಂಠಿಕೊಪ್ಪ ಠಾಣೆಯಲ್ಲಿ ೭೫ ಕೆ.ಜಿ ಕಾಳು ಮೆಣಸು ಕಳ್ಳತನ ಅಂದಾಜು ಮೌಲ್ಯ ೫೧,೩೭೫ ರೂ, ಮತ್ತು ಸ್ವಿಪ್ಟ್ ಡಿಸೈರ್ ಕಾರು ಕಳ್ಳತನ ಪ್ರಕರಣ ದಾಖಲಾಗಿದ್ದು, ಬಂಧಿತರಿಂದ ಕಳ್ಳತನದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಕೊಡಗು ಜಿಲ್ಲಾ ಪೊಲೀಸು ವರಿಷ್ಠಾಧಿಕಾರಿಗಳಾದ ಬಿಂದುಮಣಿ ಅವರ ಆದೇಶದ ಮೇರೆಗೆ ವಿರಾಜಪೇಟೆ ಉಪ ವಿಭಾಗ ಡಿವೈಎಸ್ಪಿ ಮಹೇಶ್ ಕುಮಾರ್ ಮತ್ತು ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಪಿ. ಮಾರ್ಗದರ್ಶನದಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸು ಠಾಣೆಯ ಠಾಣಾಧಿಕಾರಿ ಎನ್.ಜೆ. ಲತಾ, ಅಪರಾಧ ವಿಭಾಗ ಪಿ.ಎಸ್.ಐ. ವಾಣಿಶ್ರೀ ಮತ್ತು ಸಿಬ್ಬಂದಿಗಳಾದ ನವೀನ್, ಮಜೀದ್, ಅನೀಫ್, ಬಸವರಾಜು, ಶಿವರಾಜು, ಮಹೇಶ್ ಎಸ್, ರಾಜೇಶ್, ರಾಘವೇಂದ್ರ, ಶ್ರೀಪ್ರಸಾದ್ ಶಶಿಧರ, ಮಹೇಶ್ ಸಾರವಾಡ ಮತ್ತು ಗಿರೀಶ್ ಅವರು ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

4 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

5 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

7 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

7 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

10 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

11 hours ago