ಕೊಡಗು

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಚೆಟ್ಟಳ್ಳಿಯ ಕೋಗಿಲಹಳ್ಳ ಎಸ್ಟೇಟ್‌ನಲ್ಲಿ ನಡೆದಿದೆ.

ಒರಿಸ್ಸಾ ಮೂಲದ ಅಶ್ವಿನಾಗೊಮಾಗೊ ಮೃತ ಕಾರ್ಮಿಕ. ಕಾರ್ಮಿಕ ಮಹೇಶ್ ಹತ್ಯೆಗೈದ ಆರೋಪಿ. ಮಾ.೨ರಂದು ಮಧ್ಯಾಹ್ನ ಸುಮಾರು ೧.೪೦ ಗಂಟೆಗೆ ಮಹೇಶ್, ಅಶ್ವಿನಾಗೊಮಾಗೊನನ್ನು ಅಂಗಡಿಗೆ ಹೋಗುವ ನೆಪದಲ್ಲಿ ಮನೆಯಿಂದ ಕರೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಆದರೆ ನಂತರ ಮಹೇಶ್ ಒಬ್ಬನೇ ಮನೆಗೆ ವಾಪಸ್ಸಾಗಿದ್ದು, ಅಶ್ವಿನಾಗೊಮಾಗೊ ಮನೆಗೆ ಮರಳಿಲ್ಲ. ಸಂಜೆ ವೇಳೆಗೆ ಸಂಶಯಗೊಂಡ ಪತ್ನಿ ಹಾಗೂ ನೆರೆಹೊರೆಯವರು ಕಾಫಿ ತೋಟದಲ್ಲಿ ಹುಡುಕಾಟ ನಡೆಸಿದಾಗ, ತೋಟದ ಬೇಲಿಯ ಸಮೀಪ ಕಾಫಿ ಗಿಡದ ಕೆಳಗೆ ಮೃತದೇಹ ಪತ್ತೆಯಾಗಿದೆ.

ಮೃತದೇಹದ ಮುಖಭಾಗದಲ್ಲಿ ರಕ್ತಗಾಯಗಳು ಕಂಡು ಬಂದಿದ್ದು, ಹಳೆಯ ವೈಷಮ್ಯವೇ ಹತ್ಯೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿಂದೆ ವೈಯಕ್ತಿಕ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದ್ದುದಾಗಿ ತಿಳಿದುಬಂದಿದೆ. ಬಳಿಕ ಆರೋಪಿ ಮಹೇಶ್ ಚೆಟ್ಟಳ್ಳಿ ಠಾಣೆಗೆ ಬಂದು ನಾನೇ ಕೊಲೆ ಮಾಡಿರುವುದಾಗಿ ಶರಣಾಗಿದ್ದಾನೆ.

ಈ ಕುರಿತು ಅಶ್ವಿನಾಗೊಮಾಗೊ ಪತ್ನಿ ಸುಂಭಾರಿಗಮಂಗೋ ಚೆಟ್ಟಳ್ಳಿ ಉಪಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿ ಮಹೇಶ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸ್ಥಳಕ್ಕೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ, ಮಡಿಕೇರಿಯ ಡಿವೈಎಸ್ಪಿ ಸೂರಜ್, ಗ್ರಾಮಾಂತರ ಸಿಪಿಐ ಚಂದ್ರಶೇಖರ್, ಅಪರಾಧ ವಿಭಾಗದ ಸಿಬ್ಬಂದಿಗಳು, ಚೆಟ್ಟಳ್ಳಿ ಉಪ ಠಾಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

12 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

21 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

21 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

21 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

21 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

21 hours ago