ಕೊಡಗು

ಹೃದಯಾಘಾತದಿಂದ ಪೊಲೀಸ್‌ ಪೇದೆ ಸಾವು

ಮಡಿಕೇರಿ : ಹೃದಯಾಘಾತದಿಂದ ಮಡಿಕೇರಿಯ ಡಿಎಆರ್‌ನ ಮುಖ್ಯ ಪೇದೆಯೊಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ.

ಮೂಲತಃ ಚಾಮರಾಜನಗರ ಜಿಲ್ಲೆಯವರಾಗಿದ್ದು, ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಎನ್.ವಿಜಯ್ (47) ಎಂಬವರೆ ಮೃತಪಟ್ಟವರು. ವಿಜಯ್ ಕಳೆದ ಹಲವು ವರ್ಷಗಳಿಂದ ಮಡಿಕೇರಿಯ ಡಿಎಆರ್‌ನಲ್ಲಿ ಮುಖ್ಯ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಿಜಯ್ ಪೊಲೀಸ್ ಬ್ಯಾಂಡ್ ಮನ್ ಆಗಿಯೂ ಕೆಲಸ ಮಾಡುತ್ತಿದ್ದರು. ಹಲವು ವರ್ಷಗಳಿಂದ ಮಡಿಕೇರಿ ಮೈತ್ರಿ ಹಾಲ್‌ನ ಜವಾಬ್ದಾರಿಯನ್ನೂ ನಿಭಾಯಿಸುತ್ತಿದ್ದರು.

ಬುಧವಾರ ರಾತ್ರಿ ವಿಜಯ್‌ಗೆ ಏಕಾಏಕಿ ಎದೆನೋವು ಕಾಣಿಕೊಂಡಿದೆ ಎನ್ನಲಾಗಿದ್ದು, ಪತ್ನಿಯ ಬಳಿ ಬಿಸಿನೀರು ಕೇಳಿ ಕುಡಿದಿದ್ದಾರೆ. ಬಳಿಕ ಮಲಗಿದ್ದವರು ಅಸ್ವಸ್ಥಗೊಂಡಿದ್ದರು ಎನ್ನಲಾಗಿದ್ದು, ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಯಾವುದೇ ಪ್ರಯೋಜವಾಗಿಲ್ಲ.

ವಿಜಯ್ ಅವರ ಮೃತದೇಹವನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಯ ಶವಗಾರ ರವಾನಿಸಲಾಗಿತ್ತು. ಶವಗಾರಕ್ಕೆ ಕೊಡಗು ಎಸ್ಪಿ ರಾಮರಾಜನ್ ಸೇರಿದಂತೆ ಹಿರಿಯ ಅಧಿಕಾರಿಗಳು, ಸಿಂಬಂಧಿ ಆಸ್ಪತ್ರೆಗೆ ಆಗಮಿಸಿ ಸಂತಾಪ ಸೂಚಿಸಿದರು.

ವಿಜಯ್ ಮೃತದೇಹಕ್ಕೆ ಮಡಿಕೇರಿಯಲ್ಲಿ ಸರ್ಕಾರಿ ಗೌರವ ಸೂಚಿಸಿದ ಬಳಿಕ ಮಡಿಕೇರಿಯಿಂದ ಹುಟ್ಟೂರಿಗೆ ಕಳುಹಿಸಿಕೊಡಲಾಯಿತು. ಮೃತ ವಿಜಯ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

6 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

6 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

7 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

8 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

8 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

8 hours ago