ಕೊಡಗು

ಹೃದಯಾಘಾತದಿಂದ ಪೊಲೀಸ್‌ ಪೇದೆ ಸಾವು

ಮಡಿಕೇರಿ : ಹೃದಯಾಘಾತದಿಂದ ಮಡಿಕೇರಿಯ ಡಿಎಆರ್‌ನ ಮುಖ್ಯ ಪೇದೆಯೊಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ.

ಮೂಲತಃ ಚಾಮರಾಜನಗರ ಜಿಲ್ಲೆಯವರಾಗಿದ್ದು, ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಎನ್.ವಿಜಯ್ (47) ಎಂಬವರೆ ಮೃತಪಟ್ಟವರು. ವಿಜಯ್ ಕಳೆದ ಹಲವು ವರ್ಷಗಳಿಂದ ಮಡಿಕೇರಿಯ ಡಿಎಆರ್‌ನಲ್ಲಿ ಮುಖ್ಯ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಿಜಯ್ ಪೊಲೀಸ್ ಬ್ಯಾಂಡ್ ಮನ್ ಆಗಿಯೂ ಕೆಲಸ ಮಾಡುತ್ತಿದ್ದರು. ಹಲವು ವರ್ಷಗಳಿಂದ ಮಡಿಕೇರಿ ಮೈತ್ರಿ ಹಾಲ್‌ನ ಜವಾಬ್ದಾರಿಯನ್ನೂ ನಿಭಾಯಿಸುತ್ತಿದ್ದರು.

ಬುಧವಾರ ರಾತ್ರಿ ವಿಜಯ್‌ಗೆ ಏಕಾಏಕಿ ಎದೆನೋವು ಕಾಣಿಕೊಂಡಿದೆ ಎನ್ನಲಾಗಿದ್ದು, ಪತ್ನಿಯ ಬಳಿ ಬಿಸಿನೀರು ಕೇಳಿ ಕುಡಿದಿದ್ದಾರೆ. ಬಳಿಕ ಮಲಗಿದ್ದವರು ಅಸ್ವಸ್ಥಗೊಂಡಿದ್ದರು ಎನ್ನಲಾಗಿದ್ದು, ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಯಾವುದೇ ಪ್ರಯೋಜವಾಗಿಲ್ಲ.

ವಿಜಯ್ ಅವರ ಮೃತದೇಹವನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಯ ಶವಗಾರ ರವಾನಿಸಲಾಗಿತ್ತು. ಶವಗಾರಕ್ಕೆ ಕೊಡಗು ಎಸ್ಪಿ ರಾಮರಾಜನ್ ಸೇರಿದಂತೆ ಹಿರಿಯ ಅಧಿಕಾರಿಗಳು, ಸಿಂಬಂಧಿ ಆಸ್ಪತ್ರೆಗೆ ಆಗಮಿಸಿ ಸಂತಾಪ ಸೂಚಿಸಿದರು.

ವಿಜಯ್ ಮೃತದೇಹಕ್ಕೆ ಮಡಿಕೇರಿಯಲ್ಲಿ ಸರ್ಕಾರಿ ಗೌರವ ಸೂಚಿಸಿದ ಬಳಿಕ ಮಡಿಕೇರಿಯಿಂದ ಹುಟ್ಟೂರಿಗೆ ಕಳುಹಿಸಿಕೊಡಲಾಯಿತು. ಮೃತ ವಿಜಯ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿಎಂ ತವರಲ್ಲಿ ಬೇಸಿಗೆ ಕಾಲದಲ್ಲೂ ಕ್ಷೀರ ಕ್ರಾಂತಿ

ಕೆ.ಬಿ.ರಮೇಶನಾಯಕ ಪ್ರತಿನಿತ್ಯ ೯.೨೭ ಲಕ್ಷ ಲೀಟರ್ ಹಾಲು ಉತ್ಪಾದನೆ ಪ್ರಸಕ್ತ ಸಾಲಿನಲ್ಲಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ  ಮೈಸೂರು: ಹೈನುಗಾರಿಕೆಯನ್ನು ನಂಬಿರುವ…

4 mins ago

ರಾಜ್ಯದ 2 ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಶುರು

ಬೆಂಗಳೂರು: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಿದೆ. ಅದೇ ರೀತಿ…

13 mins ago

ಭವಾನಿಪುರದಲ್ಲಿ ಭಾರೀ ಭದ್ರತೆ ; ಮತ ಎಣಿಕೆಗೂ ಮುನ್ನ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದ ದೀದಿ

ಕೊಲ್ಕತ್ತಾ : ಪಶ್ಚಿಮ ಬಂಗಾಳ ಚುನಾವಣೆ 2026ರ ಫಲಿತಾಂಶ ಹಿನ್ನೆಲೆಯಲ್ಲಿ, ಮಮತಾ ಬ್ಯಾನರ್ಜಿ ಭವಾನಿಪುರದ ಮಾ ಬಾಗಲಮುಖಿ ದೇವಸ್ಥಾನದಲ್ಲಿ ನಿನ್ನೆ…

32 mins ago

ಪಂಚರಾಜ್ಯ ಚುನಾವಣೆ ಫಲಿತಾಂಶ ; ಮತ ಎಣಿಕೆಗೆ ಕ್ಷಣಗಣನೆ

ಬೆಂಗಳೂರು : ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ.…

41 mins ago

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

12 hours ago