ಕೊಡಗು

ಕೇರಳದ ನಾಲ್ಕು ಪ್ರವಾಸಿ ಬಸ್‌ಗಳಿಗೆ ದಂಡ ಹಾಕಿದ ಪೊಲೀಸರು: ಕಾರಣ ಇಷ್ಟೇ

ಕೊಡಗು: ಜಿಲ್ಲೆಯಲ್ಲಿ ಕೇರಳದ ನಾಲ್ಕು ಪ್ರವಾಸಿ ಬಸ್‌ಗಳಿಗೆ ಪೊಲೀಸರು ದಂಡ ಹಾಕಿದ್ದಾರೆ.

ಕೇರಳ ರಾಜ್ಯದಿಂದ ಪ್ರವಾಸಿಗರನ್ನು ಹೊತ್ತು ಕೊಡಗು ಜಿಲ್ಲೆಯ ಅನೇಕ ಸ್ಥಳಗಳಿಗೆ ಪ್ರತಿದಿನ 30ಕ್ಕೂ ಹೆಚ್ಚು ಪ್ರವಾಸಿ ಬಸ್ಸುಗಳು ಬರುತ್ತಿವೆ. ಕುಟ್ಟ ಗೇಟ್ ಮೂಲಕ ಪೊನ್ನಂಪೇಟೆ ಗೋಣಿಕೊಪ್ಪ ತಿತಿಮತಿ ಪಟ್ಟಣಕ್ಕಾಗಿ ಕುಶಾಲನಗರ, ಮೈಸೂರು ಜಿಲ್ಲೆಗೆ ಪ್ರವಾಸಕ್ಕೆ ತೆರಳುತ್ತಾರೆ. ಆದರೆ ಈ ಬಸ್‌ಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಿದ್ದು, ಹೆಚ್ಚಿನ ಶಬ್ದ ಹಾಗೂ ಕರ್ಕಶ ಸಂಗೀತದೊಂದಿಗೆ ಶಬ್ದ ಮಾಲಿನ್ಯ ಆಗುತ್ತಿರುವ ಬಗ್ಗೆ ಸಾರ್ವಜನಿಕರೊಬ್ಬರು ವಿರಾಜಪೇಟೆ ಡಿವೈಎಸ್‌ಪಿ ಅವರ ಗಮನಕ್ಕೆ ತಂದಿದ್ದರು.

ಇದನ್ನು ಓದಿ: ಕರ್ನೂಲ್‌ ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ: ಬಸ್‌ಗಳಲ್ಲಿ ಈ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ

ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಈ ಪ್ರವಾಸಿ ಬಸ್ಸುಗಳಿಗೆ ದಂಡ ವಿಧಿಸಿ ಸೂಕ್ತ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಕೇರಳ ರಾಜ್ಯದಲ್ಲಿ ಧ್ವನಿವರ್ಧಕ ಹಾಗೂ ಬಣ್ಣ ಬಣ್ಣದ ವಿದ್ಯುತ್ ದೀಪಗಳನ್ನು ಬಸ್‌ಗಳಲ್ಲಿ ಅಳವಡಿಸುವುದನ್ನು ನಿಷೇಧಿಸಲಾಗಿದೆ. ಆದರೆ ಕೇರಳದ ಗಡಿ ದಾಟಿದ ತಕ್ಷಣ ಈ ಪ್ರವಾಸಿ ಬಸ್‌ಗಳಲ್ಲಿ ಧ್ವನಿವರ್ಧಕಗಳು ಮೊಳಗುತ್ತವೆ. ಸಂಜೆಯಾಗುತ್ತಿದ್ದಂತೆ ಬಸ್ಸಿನಲ್ಲಿ ಬಣ್ಣ ಬಣ್ಣದ ದೀಪಗಳನ್ನು ಹಾಕಿಕೊಳ್ಳುವುದರೊಂದಿಗೆ ಹೆಚ್ಚಿನ ಶಬ್ದದ ಸಂಗೀತದೊಂದಿಗೆ ಶಬ್ಧಮಾಲಿನ್ಯ ಉಂಟುಮಾಡುತ್ತಿವೆ.

ಆಂದೋಲನ ಡೆಸ್ಕ್

Recent Posts

ಲಕ್ಕುಂಡಿ ಬೆನ್ನಲ್ಲೇ ಯಾದಗಿರಿಯಲ್ಲೂ ಉತ್ಖನನ ನಡೆಸಲು ಸಿದ್ಧತೆ

ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…

16 mins ago

ಸಂಸದ ಯದುವೀರ್‌ ಒಡೆಯರ್‌ ಭೇಟಿಯಾದ ಪ್ರತಾಪ್‌ ಸಿಂಹ

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಸಂಸದ ಯದುವೀರ್‌ ಒಡೆಯರ್‌ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…

37 mins ago

ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ “ಲ್ಯಾಂಡ್ ಲಾರ್ಡ್” ಸಿನಿಮಾ ನೋಡಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…

1 hour ago

ಜಮ್ಮು-ಕಾಶ್ಮೀರದಲ್ಲಿ ಭಾರೀ ಹಿಮಪಾತ: ಜನಜೀವನ ಅಸ್ತವ್ಯಸ್ತ

ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…

2 hours ago

ಪಾಕಿಸ್ತಾನ ಮದುವೆ ಸಮಾರಂಭದಲ್ಲಿ ಆತ್ಮಾಹುತಿ ದಾಳಿ: ಐವರು ಸಾವು

ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…

2 hours ago

ಪೌರಾಯುಕ್ತೆಗೆ ಬೆದರಿಕೆ ಹಾಕಿದ ಪ್ರಕರಣ: ರಾಜೀವ್‌ಗೌಡ ಮನೆಗಳಿಗೆ ನೋಟಿಸ್‌ ಅಂಟಿಸಿದ ಪೊಲೀಸರು

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಪತ್ತೆಗಾಗಿ ಪೊಲೀಸರು…

2 hours ago