ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆ, ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರಡಿಯೊಂದು ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲ್ಲೂಕು ಬಾಳಲೆ ಸಮೀಪದ ಜಾಗಲೆ ಎಂಬಲ್ಲಿ ನಡೆದಿದೆ.
ಜಾಗಲೆ ಗ್ರಾಮದ ಆಳಮೇಂಗಡ ಬಿದ್ದಪ್ಪ ಎಂಬವರ ತೋಟದ ಲೈನ್ ಮನೆಯಲ್ಲಿ ವಾಸಿಸುತ್ತಿದ್ದ ಕಾಕು ಎಂಬವರ ಪುತ್ರ ಕುಳ್ಳ (42) ಗಾಯಗೊಂಡವರು. ಮಂಗಳವಾರ ರಾತ್ರಿ 11 ಗಂಟೆ ಸಮಯದಲ್ಲಿ ಕುಳ್ಳ ಮನೆಯ ಹೊರಗಡೆ ಮೂತ್ರ ವಿಸರ್ಜನೆಗೆ ತೆರಳಿದ ಸಂದರ್ಭದಲ್ಲಿ ಕರಡಿ ಏಕಾಏಕಿ ದಾಳಿ ನಡೆಸಿದೆ. ಘಟನೆಯಿಂದ ಅವರ ಮುಖ ಹಾಗೂ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ವಿಚಾರ ತಿಳಿದ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಯೋಗ ಕ್ಷೇಮ ವಿಚಾರಿಸಿದರು. ಅಲ್ಲದೆ, ವೈದ್ಯರೊಂದಿಗೆ ಚರ್ಚಿಸಿ ಉತ್ತಮ ಚಿಕಿತ್ಸೆ ನೀಡುವಂತೆ ಮನವಿ ಮಾಡಿದ್ದಾರೆ. ತಲೆ ಭಾಗಕ್ಕೆ ಸ್ವಲ್ಪ ಪೆಟ್ಟಾಗಿದ್ದು, ಕಣ್ಣಿನ ಭಾಗಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಂಕೇತ್ ಪೂವಯ್ಯ ತಿಳಿಸಿದ್ದಾರೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…