ಪೊನ್ನಂಪೇಟೆ : ಚೆಕ್ಕೇರ ಕುಟುಂಬ, ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಹುದಿಕೇರಿ ಜನತಾ ಪ್ರೌಢಶಾಲಾ ಮೈದಾನ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮೈದಾನಗಳಲ್ಲಿ 41 ದಿನಗಳ ಚೆಕ್ಕೇರ ಕ್ರಿಕೆಟ್ ನಮ್ಮೆಗೆ ಇಂದು ಚಾಲನೆ ನೀಡಲಾಯಿತು.
ಕೋಣಗೇರಿ ರಸ್ತೆಯಲ್ಲಿರುವ ಜನತಾ ಪ್ರೌಡಶಾಲಾ ಮೈದಾನದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪಂದ್ಯಾವಳಿಯಲ್ಲಿ 281 ಪುರುಷರ ತಂಡ ಹಾಗೂ ಎಪ್ರಿಲ್ 28 ರಿಂದ 64 ಮಹಿಳೆಯರ ತಂಡಗಳು ಪಾಲ್ಗೊಳ್ಳುತ್ತಿವೆ.
ಉದ್ಘಾಟನಾ ಸಮಾರಂಭದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಭಾಗವಹಿಸಿದರು.
ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಕ್ರೀಡೆಯು, ಮನಸ್ಸು ಹಾಗೂ ದೇಹಕ್ಕೆ ಉಲ್ಲಾಸ ನೀಡುವುದು ಮಾತ್ರವಲ್ಲದೆ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವ ವೇದಿಕೆಯೂ ಆಗಿದೆ. ಪಂದ್ಯಾಟವು ಯಶಸ್ಸನ್ನು ಕಾಣಲಿ ಎಂದು ಹಾರೈಸಿದರು.
ಮಹಾದೇವರ ದೇವಸ್ಥಾನದಿಂದ ಮೆರವಣಿಗೆ, ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭ ಸ್ವಾತಂತ್ರ್ಯ ಹೋರಾಟಗಾರ ಹುಬ್ಬಳಿ ಹುಲಿ ಚೆಕ್ಕೇರ ಬಿ. ಮೊಣ್ಣಯ್ಯ ಹೆಸರಿನಲ್ಲಿ ರಸ್ತೆ ಉದ್ಘಾಟನೆ ನೆರವೇರಿತು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಚೆಕ್ಕೇರ ಕ್ರಿಕೆಟ್ ನಮ್ಮೆ ಅಧ್ಯಕ್ಷ ಚಂದ್ರಪ್ರಕಾಶ್, ನಾಡ್ ತಕ್ಕ ಚೆಕ್ಕೇರ ರಾಜೇಶ್ ಇತರರು ಪಾಲ್ಗೊಂಡಿದ್ದರು.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…