ಮಡಿಕೇರಿ : ಇಲ್ಲಿನ ಪೊನ್ನಂಪೇಟೆ ಹಳ್ಳಿಗಟ್ಟು ಸಿ.ಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ(19) ಮೃತ ವಿದ್ಯಾರ್ಥಿನಿ.
ಘಟನ ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೃತ ವಿದ್ಯಾರ್ಥಿನಿ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಆಕೆ, ಅಂದಿನ ಕಾರ್ಯಕ್ರಮಕ್ಕೆ ಬಾರದವರಿಗೆ ಇಂದು ಕೂಡ ಹುಟ್ಟು ಹಬ್ಬದ ನಿಮಿತ್ತ, ಸ್ನೇಹಿತರಿಗೆ ಸಿಹಿ ಹಂಚಿ, ತರಗತಿ ಮುಗಿದ ಬಳಿಕ ಸಂಜೆ 4 ಗಂಟೆಗೆ ಹಾಸ್ಟೆಲ್ ಸೇರಿಕೊಂಡಿದ್ದಾಳೆ ಎಂದು ಹೇಳಲಾಗಿದೆ.
4.30 ಗಂಟೆಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಬಾಗಿಲು ಒಳಗಿನಿಂದ ಹಾಕಿಕೊಂಡಿದ್ದಳು. ಎಷ್ಟೇ ಕೂಗಿದರು ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಆರು ವಿಷಯಗಳು ಬ್ಯಾಕ್ ಲಾಗ್ ಇರುವ ಕಾರಣ, ನನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ನೋಟ್ನಲ್ಲಿ ಬರೆದಿದ್ದಳು ಎಂದು ಹೇಳಲಾಗಿದೆ.
ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…
ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…
ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…
ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…