Mysore
34
few clouds

Social Media

ಮಂಗಳವಾರ, 14 ಏಪ್ರಿಲ 2026
Light
Dark

ಮಡಿಕೇರಿ| ಬೆಲೆ ಏರಿಕೆಯೇ ಕಾಂಗ್ರೆಸ್ ಸರ್ಕಾರದ ಸಾಧನೆ: ಬಿ.ವೈ.ವಿಜಯೇಂದ್ರ

ಮಡಿಕೇರಿ: ರಾಜ್ಯದಲ್ಲಿ ಈಗಿರುವ ಕಾಂಗ್ರೆಸ್‌ ಸರ್ಕಾರ ರಾಜ್ಯ ಕಂಡ ಅತ್ಯಂತ ಕೆಟ್ಟ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ರಾಜ್ಯ ಸರ್ಕಾರವು ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಹೊಟ್ಟೆಯ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಜನಾಕ್ರೋಶ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಮೈಸೂರಿನಿಂದ ಪ್ರಾರಂಭವಾದ ಜನಾಕ್ರೋಶ ಯಾತ್ರೆಯು ಈಗ ಕೊಡಗು ಜಿಲ್ಲೆ ತಲುಪಿದ್ದು, ಬಿಜೆಪಿ ನಾಯಕರು ರಾಜ್ಯ ಸರ್ಕಾರಕ್ಕೆ ಚುರುಕು ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ.

ಜನಾಕ್ರೋಶ ಯಾತ್ರೆಯ ಸಭೆಯಲ್ಲಿಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ದಿನನಿತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಲೇ ಬಂದಿದೆ. ನೂರಾರು ಹಿಂದುಳಿದ ವರ್ಗಗಳನ್ನು ಬಿಟ್ಟು ಕೇವಲ ಮುಸ್ಲಿಂ ಓಲೈಕೆಯಲ್ಲಿ ಈ ಸರ್ಕಾರ ತೊಡಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ನೀವೇ ಬುದ್ಧಿ ಕಲಿಸಬೇಕು ಎಂದು ಜನತೆಗೆ ಕರೆ ಕೊಟ್ಟರು.

Tags:
error: Content is protected !!