ಮಡಿಕೇರಿ : ಕಲ್ಯಾಣ ಕರ್ನಾಟಕದಿಂದ ಹಲವು ಪ್ರಮುಖ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಹೇಳಿದ್ದಾರೆ.
ಮಡಿಕೇರಿಯಲ್ಲಿ ಮಾತಾನಾಡಿದ ಅವರು ಕಲ್ಯಾಣ ಕರ್ನಾಟಕದಿಂದ ಈಗಾಗಲೇ ಅನೇಕರು ತನ್ನೊಂದಿಗೆ ಸಂಪರ್ಕದಲ್ಲಿ ಇದ್ದಾರೆ. ಈಗಾಗಲೇ ನಮ್ಮ ನಾಯಕರ ಜೊತೆಯಲ್ಲಿ ಅವರು ಬರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಹಲವಾರು ಮಂದಿ ನಮ್ಮ ಪಕ್ಷಕ್ಕೆ ಬರುವುದರಿಂದ ಅವರಿಂದ ಆಗುವಂತಹ ಅನುಕೂಲ ಹಾಗೂ ಅನಾನುಕೂಲಗಳ ಬಗ್ಗೆ ಮಾಹಿತಿಯನ್ನು ರಾಜ್ಯ ನಾಯಕರಿಗೆ ನೀಡಲಾಗಿದೆ ಎಂದರು.
ಇಷ್ಟೇ ಜನರು ಬರುತ್ತಾರೆ ಎಂದು ಸ್ಪಷ್ಟವಾಗಿ ಹೇಳಲು ಆಗಲ್ಲ. ಅನೇಕ ಹೊಸ ಹೊಸ ಮುಖಗಳು ನಾವು ನಂಬಲು ಆಗದೇ ಇರುವಂತಹ ಮುಖಗಳು ಪಕ್ಷಕ್ಕೆ ಬರುತ್ತಿದೆ. ಬಿಜೆಪಿಯಿಂದ ಕೆಲ ಶಾಸಕರು ಮಾಜಿ ಶಾಸಕರು ಅತಿ ಮುಖ್ಯವಾದ ನಾಯಕರು ಕಲ್ಯಾಣ ಕರ್ನಾಟಕ ಭಾಗದಿಂದ ಬರುತ್ತಿದ್ದಾರೆ ಎಂದು ತಿಳಿಸಿದರು.
ಬಿಜೆಪಿಯವರು ಮೋದಿ ಅವರ ಆಧಾರದಿಂದ ಲೋಕಸಭೆ ಚುನಾವಣೆಗೆ ಹೋಗುತ್ತಾರೆ. ಕಳೆದ ಚುನಾವಣೆಯಲ್ಲಿ ರಾಜ್ಯಕ್ಕೆ 26 ಬಾರಿ ಮೋದಿ ಅವರು ಚುನಾವಣೆಗೆ ಬಂದು ನಾನಾ ರೀತಿಯ ಸಭೆಗಳು, ರೋಡ್ ಶೋ ಮಾಡಿದ್ರು. ಆದರೂ ಯಾವುದೇ ಪ್ರಯೋಜನ ಆಗಿಲ್ಲ. ಬಿಜೆಪಿ ಅಥವಾ ಜೆಡಿಎಸ್ ನಾಯಕತ್ವದಲ್ಲಿ ಯಾವ ರೀತಿ ಮುಂದುವರಿಯಬೇಕು ಎಂಬುದು ಕಾಣುತ್ತಿಲ್ಲ ಎಂದರು.
ಇದುವರೆಗೂ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡದೆ ಇರುವುದು ಬಿಜೆಪಿ ಅವರ ದುಸ್ಥಿತಿಯಾಗಿದೆ. ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿ ನಮ್ಮ ತಪ್ಪುಗಳನ್ನು ತೋರಿಸುವ ಕೆಲಸ ಆಗಬೇಕು ಎಂದು ಬೋಸರಾಜು ಆಗ್ರಹಿಸಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…