ಮಡಿಕೇರಿ : ಕಲ್ಯಾಣ ಕರ್ನಾಟಕದಿಂದ ಹಲವು ಪ್ರಮುಖ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಹೇಳಿದ್ದಾರೆ.
ಮಡಿಕೇರಿಯಲ್ಲಿ ಮಾತಾನಾಡಿದ ಅವರು ಕಲ್ಯಾಣ ಕರ್ನಾಟಕದಿಂದ ಈಗಾಗಲೇ ಅನೇಕರು ತನ್ನೊಂದಿಗೆ ಸಂಪರ್ಕದಲ್ಲಿ ಇದ್ದಾರೆ. ಈಗಾಗಲೇ ನಮ್ಮ ನಾಯಕರ ಜೊತೆಯಲ್ಲಿ ಅವರು ಬರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಹಲವಾರು ಮಂದಿ ನಮ್ಮ ಪಕ್ಷಕ್ಕೆ ಬರುವುದರಿಂದ ಅವರಿಂದ ಆಗುವಂತಹ ಅನುಕೂಲ ಹಾಗೂ ಅನಾನುಕೂಲಗಳ ಬಗ್ಗೆ ಮಾಹಿತಿಯನ್ನು ರಾಜ್ಯ ನಾಯಕರಿಗೆ ನೀಡಲಾಗಿದೆ ಎಂದರು.
ಇಷ್ಟೇ ಜನರು ಬರುತ್ತಾರೆ ಎಂದು ಸ್ಪಷ್ಟವಾಗಿ ಹೇಳಲು ಆಗಲ್ಲ. ಅನೇಕ ಹೊಸ ಹೊಸ ಮುಖಗಳು ನಾವು ನಂಬಲು ಆಗದೇ ಇರುವಂತಹ ಮುಖಗಳು ಪಕ್ಷಕ್ಕೆ ಬರುತ್ತಿದೆ. ಬಿಜೆಪಿಯಿಂದ ಕೆಲ ಶಾಸಕರು ಮಾಜಿ ಶಾಸಕರು ಅತಿ ಮುಖ್ಯವಾದ ನಾಯಕರು ಕಲ್ಯಾಣ ಕರ್ನಾಟಕ ಭಾಗದಿಂದ ಬರುತ್ತಿದ್ದಾರೆ ಎಂದು ತಿಳಿಸಿದರು.
ಬಿಜೆಪಿಯವರು ಮೋದಿ ಅವರ ಆಧಾರದಿಂದ ಲೋಕಸಭೆ ಚುನಾವಣೆಗೆ ಹೋಗುತ್ತಾರೆ. ಕಳೆದ ಚುನಾವಣೆಯಲ್ಲಿ ರಾಜ್ಯಕ್ಕೆ 26 ಬಾರಿ ಮೋದಿ ಅವರು ಚುನಾವಣೆಗೆ ಬಂದು ನಾನಾ ರೀತಿಯ ಸಭೆಗಳು, ರೋಡ್ ಶೋ ಮಾಡಿದ್ರು. ಆದರೂ ಯಾವುದೇ ಪ್ರಯೋಜನ ಆಗಿಲ್ಲ. ಬಿಜೆಪಿ ಅಥವಾ ಜೆಡಿಎಸ್ ನಾಯಕತ್ವದಲ್ಲಿ ಯಾವ ರೀತಿ ಮುಂದುವರಿಯಬೇಕು ಎಂಬುದು ಕಾಣುತ್ತಿಲ್ಲ ಎಂದರು.
ಇದುವರೆಗೂ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡದೆ ಇರುವುದು ಬಿಜೆಪಿ ಅವರ ದುಸ್ಥಿತಿಯಾಗಿದೆ. ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿ ನಮ್ಮ ತಪ್ಪುಗಳನ್ನು ತೋರಿಸುವ ಕೆಲಸ ಆಗಬೇಕು ಎಂದು ಬೋಸರಾಜು ಆಗ್ರಹಿಸಿದರು.
‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’ ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…
ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…
ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಬೋಧಿಸಬೇಕೆಂದರೆ ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…