ಕೊಡಗು

ಕಲ್ಯಾಣ ಕರ್ನಾಟಕದ ಪ್ರಮುಖ ನಾಯಕರು ಕಾಂಗ್ರೆಸ್‌ಗೆ ಬರಲಿದ್ದಾರೆ : ಸಚಿವ ಬೋಸರಾಜು

ಮಡಿಕೇರಿ : ಕಲ್ಯಾಣ ಕರ್ನಾಟಕದಿಂದ ಹಲವು ಪ್ರಮುಖ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಹೇಳಿದ್ದಾರೆ.

ಮಡಿಕೇರಿಯಲ್ಲಿ ಮಾತಾನಾಡಿದ ಅವರು ಕಲ್ಯಾಣ ಕರ್ನಾಟಕದಿಂದ ಈಗಾಗಲೇ ಅನೇಕರು ತನ್ನೊಂದಿಗೆ ಸಂಪರ್ಕದಲ್ಲಿ ಇದ್ದಾರೆ. ಈಗಾಗಲೇ ನಮ್ಮ ನಾಯಕರ ಜೊತೆಯಲ್ಲಿ ಅವರು ಬರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಹಲವಾರು ಮಂದಿ ನಮ್ಮ ಪಕ್ಷಕ್ಕೆ ಬರುವುದರಿಂದ ಅವರಿಂದ ಆಗುವಂತಹ ಅನುಕೂಲ ಹಾಗೂ ಅನಾನುಕೂಲಗಳ ಬಗ್ಗೆ ಮಾಹಿತಿಯನ್ನು ರಾಜ್ಯ ನಾಯಕರಿಗೆ ನೀಡಲಾಗಿದೆ ಎಂದರು.

ಇಷ್ಟೇ ಜನರು ಬರುತ್ತಾರೆ ಎಂದು ಸ್ಪಷ್ಟವಾಗಿ ಹೇಳಲು ಆಗಲ್ಲ. ಅನೇಕ ಹೊಸ ಹೊಸ ಮುಖಗಳು ನಾವು ನಂಬಲು ಆಗದೇ ಇರುವಂತಹ ಮುಖಗಳು ಪಕ್ಷಕ್ಕೆ ಬರುತ್ತಿದೆ. ಬಿಜೆಪಿಯಿಂದ ಕೆಲ ಶಾಸಕರು ಮಾಜಿ ಶಾಸಕರು ಅತಿ ಮುಖ್ಯವಾದ ನಾಯಕರು ಕಲ್ಯಾಣ ಕರ್ನಾಟಕ ಭಾಗದಿಂದ ಬರುತ್ತಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯವರು ಮೋದಿ ಅವರ ಆಧಾರದಿಂದ ಲೋಕಸಭೆ ಚುನಾವಣೆಗೆ ಹೋಗುತ್ತಾರೆ. ಕಳೆದ ಚುನಾವಣೆಯಲ್ಲಿ ರಾಜ್ಯಕ್ಕೆ 26 ಬಾರಿ ಮೋದಿ ಅವರು ಚುನಾವಣೆಗೆ ಬಂದು ನಾನಾ ರೀತಿಯ ಸಭೆಗಳು, ರೋಡ್ ಶೋ ಮಾಡಿದ್ರು. ಆದರೂ ಯಾವುದೇ ಪ್ರಯೋಜನ ಆಗಿಲ್ಲ. ಬಿಜೆಪಿ ಅಥವಾ ಜೆಡಿಎಸ್ ನಾಯಕತ್ವದಲ್ಲಿ ಯಾವ ರೀತಿ ಮುಂದುವರಿಯಬೇಕು ಎಂಬುದು ಕಾಣುತ್ತಿಲ್ಲ ಎಂದರು.

ಇದುವರೆಗೂ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡದೆ ಇರುವುದು ಬಿಜೆಪಿ ಅವರ ದುಸ್ಥಿತಿಯಾಗಿದೆ. ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿ ನಮ್ಮ ತಪ್ಪುಗಳನ್ನು ತೋರಿಸುವ ಕೆಲಸ ಆಗಬೇಕು ಎಂದು ಬೋಸರಾಜು ಆಗ್ರಹಿಸಿದರು.

lokesh

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

3 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

3 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

3 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

4 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

4 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

4 hours ago