ಸಿದ್ದಾಪುರ: ಕುಶಾಲನಗರ ತಾಲೂಕಿನ ಕೂಡ್ಲೂರು ಚೆಟ್ಟಳ್ಳಿ ಗ್ರಾಮದ ರಿನಿಶಾ ಹಾಗು ಅವಳ ತಾಯಿ ಬೇಬಿರಾಣಿ 2023-24ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.!
ಗೋಣಿಕೊಪ್ಪಲಿನ ವಿದ್ಯಾನಿಕೇತನ ಕಾಲೇಜಿನಲ್ಲಿ ಓದುತಿರುವ ಎಲೆಕ್ಟ್ರಿಕಲ್ ಕ್ಲಾಸ್ 1 ಗುತ್ತಿಗೆದಾರ ಸುರೇಂದ್ರ.ಟಿ.ಕೆ ರವರ ಪುತ್ರಿ ರಿನಿಶಾ ಟಿ.ಎಸ್ 600ಕ್ಕೆ 570 ಪಡೆದು ಅತ್ಯುನ್ನತ ಅಂಕ ಪಡೆದರೆ ಅವಳ ತಾಯಿ ಬೇಬಿರಾಣಿ.ಎಂ. ಯು. ನೆಲ್ಲಿಹುದಿಕೇರಿ ಜೂನಿಯರ್ ಕಾಲೇಜಿನಲ್ಲಿ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆದು 600ಕ್ಕೆ 388 ಪಡೆಯುವ ಮೂಲಕ ಒಂದೇ ವರ್ಷದಲ್ಲಿ ತಾಯಿಮಗಳು ಪಿಯುಸಿ ಉತ್ತೀರ್ಣ ರಾಗಿದ್ದಾರೆ. ಕನ್ನಡದಲ್ಲಿ ಮಗಳು 96 ಪಡೆದರೆ ತಾಯಿ 93 ಅಂಕಪಡೆದಿದ್ದಾರೆ.
ಕಳೆದ 25 ವರ್ಷಗಳ ಹಿಂದೆ ಹತ್ತನೇ ತರಗತಿಯನ್ನು ಓದಿದ ನಂತರ ಈಗ ಮಗಳ ಒತ್ತಾಯಕ್ಕಾಗಿ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿರುವುದು ಹೆಮ್ಮೆ ಎನಿಸಿದೆ ಎಂದು ಬೇಬಿರಾಣಿ ಹೇಳುತ್ತಾಳೆ.
ನನ್ನ ತಾಯಿಯು ಪಿಯುಸಿ ಉತ್ತೀರ್ಣರಾಗಿವುದು ನಾನು ಉತ್ತೀರ್ಣರಾಗಿರು ವುದಕ್ಕಿಂತಲೂ ಹೆಮ್ಮೆಯಾಗಿದೆ ಎನ್ನುತ್ತಾಳೆ ರಿನಿಶಾ.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…