ಸಿದ್ದಾಪುರ: ಕುಶಾಲನಗರ ತಾಲೂಕಿನ ಕೂಡ್ಲೂರು ಚೆಟ್ಟಳ್ಳಿ ಗ್ರಾಮದ ರಿನಿಶಾ ಹಾಗು ಅವಳ ತಾಯಿ ಬೇಬಿರಾಣಿ 2023-24ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.!
ಗೋಣಿಕೊಪ್ಪಲಿನ ವಿದ್ಯಾನಿಕೇತನ ಕಾಲೇಜಿನಲ್ಲಿ ಓದುತಿರುವ ಎಲೆಕ್ಟ್ರಿಕಲ್ ಕ್ಲಾಸ್ 1 ಗುತ್ತಿಗೆದಾರ ಸುರೇಂದ್ರ.ಟಿ.ಕೆ ರವರ ಪುತ್ರಿ ರಿನಿಶಾ ಟಿ.ಎಸ್ 600ಕ್ಕೆ 570 ಪಡೆದು ಅತ್ಯುನ್ನತ ಅಂಕ ಪಡೆದರೆ ಅವಳ ತಾಯಿ ಬೇಬಿರಾಣಿ.ಎಂ. ಯು. ನೆಲ್ಲಿಹುದಿಕೇರಿ ಜೂನಿಯರ್ ಕಾಲೇಜಿನಲ್ಲಿ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆದು 600ಕ್ಕೆ 388 ಪಡೆಯುವ ಮೂಲಕ ಒಂದೇ ವರ್ಷದಲ್ಲಿ ತಾಯಿಮಗಳು ಪಿಯುಸಿ ಉತ್ತೀರ್ಣ ರಾಗಿದ್ದಾರೆ. ಕನ್ನಡದಲ್ಲಿ ಮಗಳು 96 ಪಡೆದರೆ ತಾಯಿ 93 ಅಂಕಪಡೆದಿದ್ದಾರೆ.
ಕಳೆದ 25 ವರ್ಷಗಳ ಹಿಂದೆ ಹತ್ತನೇ ತರಗತಿಯನ್ನು ಓದಿದ ನಂತರ ಈಗ ಮಗಳ ಒತ್ತಾಯಕ್ಕಾಗಿ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿರುವುದು ಹೆಮ್ಮೆ ಎನಿಸಿದೆ ಎಂದು ಬೇಬಿರಾಣಿ ಹೇಳುತ್ತಾಳೆ.
ನನ್ನ ತಾಯಿಯು ಪಿಯುಸಿ ಉತ್ತೀರ್ಣರಾಗಿವುದು ನಾನು ಉತ್ತೀರ್ಣರಾಗಿರು ವುದಕ್ಕಿಂತಲೂ ಹೆಮ್ಮೆಯಾಗಿದೆ ಎನ್ನುತ್ತಾಳೆ ರಿನಿಶಾ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…