ಕುಶಾಲನಗರ : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕುಶಾಲನಗರದಲ್ಲಿ ನಡೆಸಲಾದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ರಾಷ್ಟ್ರ ರಕ್ಷಣಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಪುನಿತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಶ್ರೀ ಬಸವಲಿಂಗ ಸಿದ್ದಲಿಂಗ ಸ್ವಾಮೀಜಿ ಮಾತನಾಡುತ್ತಿದ್ದ ವೇಳೆ ದಿಢೀರ್ ಆಗಿ ಪ್ರತ್ಯೇಕಗೊಂಡ ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೆಹಳ್ಳಿಯಿಂದ ಗೊಂದಲಮಯ ವಾತಾವರಣ ನಿರ್ಮಾಣವಾಯಿತು. ವೇದಿಕೆ ಮೇಲಿಂದ ಪುನೀತ್ ಜೈ ಶ್ರೀರಾಮ ಎಂಬ ಘೋಷಣೆ ಕೂಗುತ್ತಿದ್ದಂತೆ ನೆರೆದಿದ್ದ ಪ್ರತಿಭಟನಾಕಾರರು ಕೂಡ ಜೈ ಶ್ರೀರಾಮ್ ಘೋಷಣೆ ಮೊಳಗಿಸಿದರು. ಇದರಿಂದ ತಬ್ಬಿಬ್ಬುಗೊಂಡ ಪೊಲೀಸರು ಕೆರೆಹಳ್ಳಿಯನ್ನು ವೇದಿಕೆಯಿಂದ ಕೆಳಗಿಸಲು ಮುನ್ನುಗ್ಗಿದರು. ಈ ವೇಳೆ ಗೊಂದಲಮಯ ವಾತಾವರಣ ನಿರ್ಮಾಣವಾಯಿತು.
ಪೊಲೀಸರು ಗಣಪತಿ ದೇವಾಲಯ ವೇದಿಕೆ ಸುತ್ತುವರಿದರು. ಇದರಿಂದ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ, ನೂಕು ನುಗ್ಗಲು ಉಂಟಾಯಿತು. ಹರಸಾಹಸಪಟ್ಟು ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿ ಕರೆದುಕೊಂಡು ಹೋದರು. ಕೆರೆಹಳ್ಳಿ ಬಂಧನ ಖಂಡಿಸಿ ಪ್ರತಿಭಟನಾಕಾರರು ಮತ್ತು ಪೊಲೀಸರು ನಡುವೆ ಮಾತಿನ ಚಕಮುಕಿ ನಡೆಯಿತು. ಅನುಮತಿ ಪಡೆಯದೆ ಪುನೀತ್ ಪ್ರತಿಭಟನೆಯಲ್ಲಿ ಭಾಗಿಯಾಗಿರುವುದು ಹಾಗೂ ಬಹಿರಂಗ ಸಭೆಯಲ್ಲಿ ಮಾತನಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿ ಪೊಲೀಸರು ಬಲವಂತವಾಗಿ ಕೆರೆಹಳ್ಳಿಯನ್ನು ಕರೆದುಕೊಂಡು ಹೋದರು. ಕೊಡಗಿನ ಗಡಿಯಾಚೆ ಬೈಲುಕೊಪ್ಪ ಪೊಲೀಸ್ ಠಾಣೆಗೆ ಕೆರೆಹಳ್ಳಿಯನ್ನು ಹಸ್ತಾಂತರಿಸಿದ ಪೊಲೀಸರು ಗಡಿಪಾರು ಮಾಡಿದರು.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…