ಕೊಡಗು

ಅನುಮತಿಯಿಲ್ಲದೆ ಭಾಷಣಕ್ಕೆ ಮುಂದಾದ ಪುನಿತ್ ಕೆರೆಹಳ್ಳಿ ಪೊಲೀಸ್ ವಶಕ್ಕೆ

ಕುಶಾಲನಗರ : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕುಶಾಲನಗರದಲ್ಲಿ ನಡೆಸಲಾದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ರಾಷ್ಟ್ರ ರಕ್ಷಣಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಪುನಿತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಶ್ರೀ ಬಸವಲಿಂಗ ಸಿದ್ದಲಿಂಗ ಸ್ವಾಮೀಜಿ ಮಾತನಾಡುತ್ತಿದ್ದ ವೇಳೆ ದಿಢೀರ್ ಆಗಿ ಪ್ರತ್ಯೇಕಗೊಂಡ ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೆಹಳ್ಳಿಯಿಂದ ಗೊಂದಲಮಯ ವಾತಾವರಣ ನಿರ್ಮಾಣವಾಯಿತು. ವೇದಿಕೆ ಮೇಲಿಂದ ಪುನೀತ್ ಜೈ ಶ್ರೀರಾಮ ಎಂಬ ಘೋಷಣೆ ಕೂಗುತ್ತಿದ್ದಂತೆ ನೆರೆದಿದ್ದ ಪ್ರತಿಭಟನಾಕಾರರು ಕೂಡ ಜೈ ಶ್ರೀರಾಮ್ ಘೋಷಣೆ ಮೊಳಗಿಸಿದರು. ಇದರಿಂದ ತಬ್ಬಿಬ್ಬುಗೊಂಡ ಪೊಲೀಸರು ಕೆರೆಹಳ್ಳಿಯನ್ನು ವೇದಿಕೆಯಿಂದ ಕೆಳಗಿಸಲು ಮುನ್ನುಗ್ಗಿದರು. ಈ ವೇಳೆ ಗೊಂದಲಮಯ ವಾತಾವರಣ ನಿರ್ಮಾಣವಾಯಿತು.

ಪೊಲೀಸರು ಗಣಪತಿ ದೇವಾಲಯ ವೇದಿಕೆ ಸುತ್ತುವರಿದರು. ಇದರಿಂದ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ, ನೂಕು ನುಗ್ಗಲು ಉಂಟಾಯಿತು. ಹರಸಾಹಸಪಟ್ಟು ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿ ಕರೆದುಕೊಂಡು ಹೋದರು. ಕೆರೆಹಳ್ಳಿ ಬಂಧನ ಖಂಡಿಸಿ ಪ್ರತಿಭಟನಾಕಾರರು ಮತ್ತು ಪೊಲೀಸರು ನಡುವೆ ಮಾತಿನ ಚಕಮುಕಿ ನಡೆಯಿತು. ಅನುಮತಿ ಪಡೆಯದೆ ಪುನೀತ್ ಪ್ರತಿಭಟನೆಯಲ್ಲಿ ಭಾಗಿಯಾಗಿರುವುದು ಹಾಗೂ ಬಹಿರಂಗ ಸಭೆಯಲ್ಲಿ ಮಾತನಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿ ಪೊಲೀಸರು ಬಲವಂತವಾಗಿ ಕೆರೆಹಳ್ಳಿಯನ್ನು ಕರೆದುಕೊಂಡು ಹೋದರು. ಕೊಡಗಿನ ಗಡಿಯಾಚೆ ಬೈಲುಕೊಪ್ಪ ಪೊಲೀಸ್ ಠಾಣೆಗೆ ಕೆರೆಹಳ್ಳಿಯನ್ನು ಹಸ್ತಾಂತರಿಸಿದ ಪೊಲೀಸರು ಗಡಿಪಾರು ಮಾಡಿದರು.

ಆಂದೋಲನ ಡೆಸ್ಕ್

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

9 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

12 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

13 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

14 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

14 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

15 hours ago