ಕೊಡಗು: ಕೊಡಗಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಭಾರೀ ಮಳೆಯಿಂದ ದ್ವಿಚಕ್ರ ವಾಹನ ಸವಾರರ ಗೋಳು ಹೇಳತೀರದಾಗಿದೆ. ಧಾರಾಕಾರ ಮಳೆಯಿಂದ ಹಲವೆಡೆ ಬೃಹತ್ ಗಾತ್ರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಇದನ್ನೂ ಓದಿ:- ಭೋರ್ಗರೆಯುತ್ತಿರುವ ಚುಂಚನಕಟ್ಟೆ ಜಲಪಾತ
ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆಲ ಸೇತುವೆಗಳು ಜಲಾವೃತಗೊಂಡಿದ್ದು, ಜನತೆಯಲ್ಲಿ ಆತಂಕ ಸೃಷ್ಟಿಯಾಗಿದೆ. ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.





