ಕೊಡಗು

ಚುರುಕುಗೊಂಡ ಮಳೆ ; ರೆಡ್‌ ಅಲರ್ಟ್‌ ಘೋಷಣೆ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿದ್ದು, ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದೆ. ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕಳೆದ ೨ ದಿನಗಳಿಂದ ಜಿಲ್ಲೆಯಾದ್ಯಂತ ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದೆ. ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನಿರಂತರ ಮಳೆಯಿಂದ ನದಿ- ತೊರೆಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಭಾರೀ ಮಳೆಯಾಗುವುದಾಗಿ ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಎಚ್ಚರದಿಂದ ಇರಲು ಮನವಿ ಮಾಡಲಾಗಿದೆ.

ಕಳೆದ ೨೪ ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ೪೯.೪೪ ಮಿ.ಮೀ. ಸರಾಸರಿ ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೧೭.೫೫ ಮಿ.ಮೀ. ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ೬೦.೩೦ ಮಿ.ಮೀ., ವಿರಾಜಪೇಟೆ ತಾಲ್ಲೂಕಿನಲ್ಲಿ ೫೨.೨೫ ಮಿ.ಮೀ., ಪೊನ್ನಂಪೇಟೆ ತಾಲ್ಲೂಕಿನಲ್ಲಿ ೩೫.೦೭ ಮಿ.ಮೀ., ಸೋಮವಾರಪೇಟೆ ತಾಲ್ಲೂಕಿನಲ್ಲಿ ೭೯.೬೦ ಮಿ.ಮೀ., ಕುಶಾಲನಗರ ತಾಲ್ಲೂಕಿನಲ್ಲಿ ೨೦ ಮಿ.ಮೀ. ಮಳೆಯಾಗಿದೆ.

ಮಡಿಕೇರಿ ಕಸಬಾ ೫೩.೫೦, ನಾಪೋಕ್ಲು ೫೨.೨೦, ಸಂಪಾಜೆ ೫೭.೫೦, ಭಾಗಮಂಡಲ ೭೮, ವಿರಾಜಪೇಟೆ ೫೯, ಅಮ್ಮತ್ತಿ ೪೬.೫೦, ಹುದಿಕೇರಿ ೫೦.೮೦, ಶ್ರೀಮಂಗಲ ೪೩.೬೦, ಪೊನ್ನಂಪೇಟೆ ೨೭, ಬಾಳೆಲೆ ೧೮.೯೦, ಸೋಮವಾರಪೇಟೆ ೮೨.೬೦, ಶನಿವಾರಸಂತೆ ೬೧, ಶಾಂತಳ್ಳಿ ೧೪೦, ಕೊಡ್ಲಿಪೇಟೆ ೩೪.೮೦, ಕುಶಾಲನಗರ ೧೦, ಸುಂಟಿಕೊಪ್ಪ ೩೦ ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾನಯನ ಪ್ರದೇಶದಲ್ಲಿಯೂ ಉತ್ತಮ ಮಳೆಯಾಗುತ್ತಿರುವುದರಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಜಲಾಶಯಕ್ಕೆ ೭,೫೮೨ ಕ್ಯೂಸೆಕ್ಸ್‌ನಷ್ಟು ನೀರು ಹರಿದು ಬರುತ್ತಿದ್ದು, ೧೦,೦೦೦ ಕ್ಯೂಸೆಕ್ಸ್‌ನಷ್ಟು ನೀರನ್ನು ನದಿಗೆ ಹರಿಯಬಿಡಲಾಗುತ್ತಿದೆ. ಮಳೆ ಹೆಚ್ಚಾದಲ್ಲಿ ಹೊರಹರಿವು ಪ್ರಮಾಣ ಹೆಚ್ಚಿಸುವ ಸಾಧ್ಯತೆ ಇದೆ.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago