ಕೊಡಗು

ಕೊಡಗಿನ ನಂಬರ್‌ ಒನ್‌ ಟ್ಯಾಕ್ಸ್‌ ಪೇಯರ್‌ ರಶ್ಮಿಕಾ ಮಂದಣ್ಣ!

ಕೊಡಗು : ಕರುನಾಡಿನ ಕೊಡಗಿನ ಸುಂದರಿ ಸಿನಿ ತಾರೆ ರಶ್ಮಿಕಾ ಮಂದಣ್ಣ ದೇಶ-ವಿದೇಶಗಳಲ್ಲೂ ಖ್ಯಾತಿ ಪಡೆದಿದ್ದಾರೆ. ಹೀಗಾಗಿ ಅವರು ಆಗಾಗ್ಗೆ ಸುದ್ದಿಯಲ್ಲೂ ಇರ್ತಾರೆ. ಅದರಲ್ಲೂ ಟ್ರೋಲ್ ಆದ ವಿಷಯದಲ್ಲೇ ಸುದ್ದಿ ಹಾಗೋದು ತುಸು ಹೆಚ್ಚು. ಆದರೆ ಈ ಭಾರಿ ಕೊಡಗಿನಲ್ಲಿ ವಿಭಿನ್ನ ರೀತಿಯಲ್ಲಿ ಸುದ್ದಿಯಲ್ಲಿದ್ದಾರೆ.

ಹೌದು… ಆದಾಯ ತೆರಿಗೆ ಪಾವತಿಯಲ್ಲಿ ಕೊಡಗಿಗೆ ನಂಬರ್ 1 ಆಗಿ ಹೊರಹೊಮ್ಮಿದ್ದಾರೆ ರಶ್ಮಿಕಾ. ಕನ್ನಡ ಚಿತ್ರರಂಗದಿಂದ ಗುರುತಿಸಿಕೊಂಡು ನಂತರದಲ್ಲಿ ತೆಲುಗು ಸೇರಿದಂತೆ ಬಾಲಿವುಡ್ನಲ್ಲಿಯೂ ಬಹುಬೇಡಿಕೆಯ ನಟಿಯಾಗಿರುವ ರಶ್ಮಿಕಾ ಮಂದಣ್ಣ ತಮ್ಮ ಉದ್ಯಮದ ಹಣಕಾಸಿನ ವಹಿವಾಟನ್ನು ರಶ್ಮಿಕಾ ಮಂದಣ್ಣ ಪ್ರೊಡಕ್ಷನ್ಸ್ ಎಲ್ಎಲ್ಪಿ ಹೆಸರಿನಲ್ಲೇ ಮಾಡುತ್ತಿದ್ದಾರೆ

2022 ರ ಆಗಸ್ಟ್ನಲ್ಲಿ ಈ ಸಂಸ್ಥೆ ಸ್ಥಾಪನೆಯಾಗಿದ್ದು ಈಗ 2025-26ನೇ ಆರ್ಥಿಕ ವರ್ಷದಲ್ಲಿ ಕೊಡಗು ಜಿಲ್ಲೆಯಿಂದ ಅತೀ ಹೆಚ್ಚು ಆದಾಯ ತೆರಿಗೆ ಪಾವತಿದಾರರಾಗಿ ಇವರು ಗುರುತಿಸಲ್ಪಟ್ಟಿದ್ದಾರೆ. ಪ್ರಸಕ್ತ ಸಾಲಿನ ಆರ್ಥಿಕ ವರ್ಷದ ಮೂರು ಅವಧಿಯಲ್ಲಿ ತೆರಿಗೆ ಪಾವತಿಯಲ್ಲಿ ಇವರೇ ನಂಬರ್ 1 ಆಗಿದ್ದಾರೆ. ಈ ವರ್ಷದ ಹಣಕಾಸು ವರ್ಷ ಅಂತ್ಯವಾಗುವ ಮಾರ್ಚ್ವರೆಗೂ ಈ ಸ್ಥಾನದಲ್ಲೇ ರಶ್ಮಿಕಾ ಮುಂದುವರೆಯಬಹುದು ಎಂಬ ವಿಶ್ವಾಸವನ್ನು ಆದಾಯ ತೆರಿಗೆ ಇಲಾಖೆ ಹೊಂದಿದೆ.

ಪ್ರಸ್ತುತ ರಶ್ಮಿಕಾ ಅವರು ತೆರಿಗೆ ಪಾವತಿಯಲ್ಲಿ ಕೊಡಗು ಜಿಲ್ಲೆಯಿಂದ ಮೊದಲ ಸ್ಥಾನದಲ್ಲಿರುವ ವಿಚಾರದ ಬಗ್ಗೆ ಆದಾಯ ತೆರಿಗೆ ಇಲಾಖೆ ಅವರ ಪೋಷಕರಲ್ಲಿ ತಿಳಿಸಿದ್ದು ಹರ್ಷ ವ್ಯಕ್ತಪಡಿಸಿದೆ. ತೆರಿಗೆ ಪಾವತಿಯಲ್ಲಿ ಜಿಲ್ಲೆಯಿಂದ ಮೊದಲ ಸ್ಥಾನದಲ್ಲಿರುವ ರಶ್ಮಿಕಾ ವಿಕಸಿತ ಭಾರತದ ಬ್ರ್ಯಾಂಡ್ ಅಬಾಸಿಡರ್ ಆಗಿಯೂ ಗುರುತಿಸಲ್ಪಟ್ಟಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…

57 mins ago

ಮೈಸೂರಿನಲ್ಲಿ ನಾಳೆ ಇಂದ ಮೂರು ದಿನ ದೇಸಿ ಎಣ್ಣೆ ಮೇಳ : ಮೇಳೈಸಲಿದೆ ಸಾಂಪ್ರದಾಯಿಕ ಎಣ್ಣೆ

ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…

3 hours ago

ಬಿ-ಖಾತಾಗಳಿಗೂ ʼಎ-ಖಾತಾʼ ಭಾಗ್ಯ ; ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…

4 hours ago

ಮಂಡ್ಯದಲ್ಲಿ ಕೆಂಪೇಗೌಡರ ಬೃಹತ್‌ ಪ್ರತಿಮೆ : ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಕೆತ್ತನೆ ಜವಾಬ್ದಾರಿ

ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…

4 hours ago

ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಚಿಂತನೆ : ಸಂಸದ ಯದುವೀರ್‌

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…

5 hours ago

ಗೃಹಲಕ್ಷ್ಮಿ ಹಣ ಶೀಘ್ರ ಸಂದಾಯ : ಸಚಿವೆ ಹೆಬ್ಬಾಳಕರ್‌

ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…

5 hours ago