ಕೊಡಗು

ಕೊಡಗಿನ ನಂಬರ್‌ ಒನ್‌ ಟ್ಯಾಕ್ಸ್‌ ಪೇಯರ್‌ ರಶ್ಮಿಕಾ ಮಂದಣ್ಣ!

ಕೊಡಗು : ಕರುನಾಡಿನ ಕೊಡಗಿನ ಸುಂದರಿ ಸಿನಿ ತಾರೆ ರಶ್ಮಿಕಾ ಮಂದಣ್ಣ ದೇಶ-ವಿದೇಶಗಳಲ್ಲೂ ಖ್ಯಾತಿ ಪಡೆದಿದ್ದಾರೆ. ಹೀಗಾಗಿ ಅವರು ಆಗಾಗ್ಗೆ ಸುದ್ದಿಯಲ್ಲೂ ಇರ್ತಾರೆ. ಅದರಲ್ಲೂ ಟ್ರೋಲ್ ಆದ ವಿಷಯದಲ್ಲೇ ಸುದ್ದಿ ಹಾಗೋದು ತುಸು ಹೆಚ್ಚು. ಆದರೆ ಈ ಭಾರಿ ಕೊಡಗಿನಲ್ಲಿ ವಿಭಿನ್ನ ರೀತಿಯಲ್ಲಿ ಸುದ್ದಿಯಲ್ಲಿದ್ದಾರೆ.

ಹೌದು… ಆದಾಯ ತೆರಿಗೆ ಪಾವತಿಯಲ್ಲಿ ಕೊಡಗಿಗೆ ನಂಬರ್ 1 ಆಗಿ ಹೊರಹೊಮ್ಮಿದ್ದಾರೆ ರಶ್ಮಿಕಾ. ಕನ್ನಡ ಚಿತ್ರರಂಗದಿಂದ ಗುರುತಿಸಿಕೊಂಡು ನಂತರದಲ್ಲಿ ತೆಲುಗು ಸೇರಿದಂತೆ ಬಾಲಿವುಡ್ನಲ್ಲಿಯೂ ಬಹುಬೇಡಿಕೆಯ ನಟಿಯಾಗಿರುವ ರಶ್ಮಿಕಾ ಮಂದಣ್ಣ ತಮ್ಮ ಉದ್ಯಮದ ಹಣಕಾಸಿನ ವಹಿವಾಟನ್ನು ರಶ್ಮಿಕಾ ಮಂದಣ್ಣ ಪ್ರೊಡಕ್ಷನ್ಸ್ ಎಲ್ಎಲ್ಪಿ ಹೆಸರಿನಲ್ಲೇ ಮಾಡುತ್ತಿದ್ದಾರೆ

2022 ರ ಆಗಸ್ಟ್ನಲ್ಲಿ ಈ ಸಂಸ್ಥೆ ಸ್ಥಾಪನೆಯಾಗಿದ್ದು ಈಗ 2025-26ನೇ ಆರ್ಥಿಕ ವರ್ಷದಲ್ಲಿ ಕೊಡಗು ಜಿಲ್ಲೆಯಿಂದ ಅತೀ ಹೆಚ್ಚು ಆದಾಯ ತೆರಿಗೆ ಪಾವತಿದಾರರಾಗಿ ಇವರು ಗುರುತಿಸಲ್ಪಟ್ಟಿದ್ದಾರೆ. ಪ್ರಸಕ್ತ ಸಾಲಿನ ಆರ್ಥಿಕ ವರ್ಷದ ಮೂರು ಅವಧಿಯಲ್ಲಿ ತೆರಿಗೆ ಪಾವತಿಯಲ್ಲಿ ಇವರೇ ನಂಬರ್ 1 ಆಗಿದ್ದಾರೆ. ಈ ವರ್ಷದ ಹಣಕಾಸು ವರ್ಷ ಅಂತ್ಯವಾಗುವ ಮಾರ್ಚ್ವರೆಗೂ ಈ ಸ್ಥಾನದಲ್ಲೇ ರಶ್ಮಿಕಾ ಮುಂದುವರೆಯಬಹುದು ಎಂಬ ವಿಶ್ವಾಸವನ್ನು ಆದಾಯ ತೆರಿಗೆ ಇಲಾಖೆ ಹೊಂದಿದೆ.

ಪ್ರಸ್ತುತ ರಶ್ಮಿಕಾ ಅವರು ತೆರಿಗೆ ಪಾವತಿಯಲ್ಲಿ ಕೊಡಗು ಜಿಲ್ಲೆಯಿಂದ ಮೊದಲ ಸ್ಥಾನದಲ್ಲಿರುವ ವಿಚಾರದ ಬಗ್ಗೆ ಆದಾಯ ತೆರಿಗೆ ಇಲಾಖೆ ಅವರ ಪೋಷಕರಲ್ಲಿ ತಿಳಿಸಿದ್ದು ಹರ್ಷ ವ್ಯಕ್ತಪಡಿಸಿದೆ. ತೆರಿಗೆ ಪಾವತಿಯಲ್ಲಿ ಜಿಲ್ಲೆಯಿಂದ ಮೊದಲ ಸ್ಥಾನದಲ್ಲಿರುವ ರಶ್ಮಿಕಾ ವಿಕಸಿತ ಭಾರತದ ಬ್ರ್ಯಾಂಡ್ ಅಬಾಸಿಡರ್ ಆಗಿಯೂ ಗುರುತಿಸಲ್ಪಟ್ಟಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಐ ಸಮ್ಮಿಟ್‌ನಲ್ಲಿ ಯುವ ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ : ಮಾರ್ಗರೇಟ್ ಆಳ್ವಾ ಖಂಡನೆ

ಬೆಂಗಳೂರು : ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ…

1 hour ago

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಮಂಡ್ಯ: ಫೆ.28 ರಿಂದ ಮಾ.17ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ…

1 hour ago

ಮೈಸೂರು | ಸ್ವಚ್ಛತಾ ರಾಯಾಭಾರಿಗಳಾಗಿ ಆರು ಗಣ್ಯರ ನೇಮಕ

ಮೈಸೂರು : ಐತಿಹಾಸಿಕ ಪರಂಪರೆ, ಸಾಂಸ್ಕ ತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ…

2 hours ago

ನಟ ದರ್ಶನ್‌ಗೆ ಬಿಗ್‌ ರಿಲೀಫ್‌: ಗನ್‌ ಲೈಸೆನ್ಸ್‌ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್‌ ಅವರ…

3 hours ago

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ: ರಾಜ್ಯದಲ್ಲೂ ಹೈಅಲರ್ಟ್‌ ಎಂದ ಪರಮೇಶ್ವರ್‌

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್‌ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…

3 hours ago

ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ: ಸಚಿವ ಕೆ.ವೆಂಕಟೇಶ್‌

ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದಲಿತ ಸಿಎಂ ಕೂಗು…

4 hours ago