Mysore
21
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

ಮಡಿಕೇರಿ | ಕಡಿಮೆಯಾದ ವರುಣನ ಅಬ್ಬರ

kodagu rain

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಗುರುವಾರ ಕಡಿಮೆಯಾಗಿದ್ದು, ಸ್ವಲ್ಪ ಬಿಡುವು ನೀಡಿದೆ.

ಬುಧವಾರ ರಾತ್ರಿ ಮಳೆ ಸುರಿಯಿತಾದರೂ ಗುರುವಾರ ಬೆಳಿಗ್ಗೆಯಿಂದಲೇ ಮಳೆಯ ಪ್ರಮಾಣ ಕಡಿಮೆಯಾಗಿದೆ. ಭಾಗಮಂಡಲ ವ್ಯಾಪ್ತಿಯಲ್ಲಿಯೂ ಮಳೆ ಕಡಿಮೆಯಾಗಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿದೆ. ನದಿ ತೊರೆಗಳಲ್ಲಿಯೂ ನೀರು ಇಳಿಮುಖಗೊಂಡಿದೆ.

ಮುಂಜಾಗ್ರತಾ ಕ್ರಮವಾಗಿ ಮೇ 30 ರಂದು ಕೂಡ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶುಕ್ರವಾರದಿಂದ ಮಳೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Tags:
error: Content is protected !!