ಕೊಡಗು : ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಲಾಶಯಗಳು, ನದಿಗಳು ಉಕ್ಕಿ ಹರಿಯುತ್ತಿವೆ. ಸಂಪಾಜೆಯಲ್ಲಿ ಪಯಸ್ವಿನಿ ನದಿ ಸಹ ತುಂಬಿ ಹರಿಯುತ್ತಿದ್ದು, ಸಂಪಾಜೆ ಸಮೀಪದ ಕೊಯನಾಡಿನ ಬಂಡಡ್ಕ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಜಲದಿಗ್ಬಂಧನವಾಗಿದೆ.
ನದಿಯಾಚೆ ಐದು ಕುಟುಂಬಗಳು ವಾಸವಿದ್ದವು. ಆದರೆ ಪ್ರವಾಹಕ್ಕೂ ಮೊದಲೇ ೪ ಕುಟುಂಬಗಳು ಸ್ಥಳಾಂತರವಾಗಿವೆ. ಆದರೆ ನದಿಯಾಚೆ ಮನೆಯಲ್ಲೇ ಉಳಿದಿರುವ ಲಿಂಗಪ್ಪ ಕುಟುಂಬ, ನದಿ ದಾಟಲಾಗದೆ ಕಳೆದ ೫ ದಿನಗಳಿಂದ ಮನೆಯಲ್ಲೆ ಪರದಾಡುತ್ತಿದ್ದಾರೆ. ಕಾಯಿಲೆ ಪೀಡಿತ, ವೃದ್ಧ ತಾಯಿ ಜೊತೆ ಲಿಂಗಪ್ಪ ಮನೆಯಲ್ಲಿ ವಾಸಮಾಡುತ್ತಿದ್ದು, ಪ್ರವಾಹದಿಂದ ನಮ್ಮನ್ನ ರಕ್ಷಣೆ ಮಾಡಿ ಎಂದು ಅಂಗಲಾಚುತ್ತಿದ್ದಾರೆ.
ಈಗಾಗಲೇ ಮರ ಬಿದ್ದು ನಿರ್ಮಾಣ ಹಂತದಲ್ಲಿ ಸಂಕದ ಸೇತುವೆ ಪ್ರವಾಹದಲ್ಲಿ ಕೊಚ್ಚಿ ಹೋಗಿದೆ. ಹೀಗಾಗಿ ಊರಿನ ಸಂಪರ್ಕ ಇಲ್ಲದೆ ಲಿಂಗಪ್ಪ ಕುಟುಂಬ ನರಕಯಾತನೆ ಅನುಭವಿಸುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಆ ಕುಟುಂಬವನ್ನ ರಕ್ಷಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…