ಮಡಿಕೇರಿ: ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಅಲ್ಲಲ್ಲಿ ಭೂ ಕುಸಿತದಂತಹ ಪ್ರಕೃತಿ ವಿಕೋಪಗಳು ಸಂಭವಿಸುತ್ತಲೇ ಇದೆ. ಕೊಡಗು ಜಿಲ್ಲೆಯಲ್ಲೂ ಮಳೆ ಆರ್ಭಟ ಮುಂದುವರೆದಿದ್ದು, ಮಳೆಗೆ ಕರ್ನಾಟಕ-ಕೇರಳ ರಾಜ್ಯ ಹೆದ್ದಾರಿಯ ರಸ್ತೆ ಬದಿ ಕುಸಿದು ತೋಡಿಗೆ ಮಣ್ಣು ಬಿದ್ದಿದೆ.
ನೆರೆಯ ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಗೋಣಿಕೊಪ್ಪಲು ಕುಟ್ಟ ರಾಜ್ಯ ಹೆದ್ದಾರಿ ಕುಟ್ಟದಿಂದ 3 ಕಿ.ಮೀ ದೂರದಲ್ಲಿ ಶ್ರೀಮಂಗಲ ಕಡೆಗೆ ಬರುವ ರಸ್ತೆ ಮಾರ್ಗದ ಎಡಬದಿ ರಸ್ತೆ ಕುಸಿದು ತೋಡಿಗೆ ಮಣ್ಣು ಬಿದ್ದಿದ್ದು, ವಾಹನ ಸಂಚಾರರು ತಿರುಗಾಡಲು ಹರಸಾಹಸ ಪಡುತ್ತಿದ್ದಾರೆ.
ಇನ್ನೂ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕುಟ್ಟಾ ಠಾಣಾಧಿಕಾರಿ ಮಹದೇವ್ ಹಾಗೂ ಸಿಬ್ಬಂದಿಗಳು ಬಾರಿಕೇಡ್ ಅಳವಡಿಸಿ ರಸ್ತೆಯ ಒಂದು ಭಾಗದಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…