ಕೊಡಗು

ಮಡಿಕೇರಿಯಲ್ಲಿ ಹಾಲಿನ ಡೈರಿಗೆ ಕನ್ನಹಾಕಿದ ಖದೀಮರು

ಕೊಡಗು: ಮಡಿಕೇರಿ ಜಿಲ್ಲಾ ಆಸ್ಪತ್ರೆ ಎದುರಿನಲ್ಲಿರುವ ಕುಮಾರ್‌ ಎಂಬುವವರ ಹಾಲಿನ ಡೈರಿಯಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಕಳ್ಳರು 50 ಸಾವಿರ ರೂಪಾಯಿ ದೋಚಿ ಪರಾರಿಯಾಗಿದ್ದಾರೆ.

ಮಧ್ಯರಾತ್ರಿ ಸುಮಾರು 12.50ರ ಸಮಯದಲ್ಲಿ ಬೈಕ್‌ನಲ್ಲಿ ಬಂದ ಮುಸುಕುದಾರಿ ಕಳ್ಳರು, ಕಬ್ಬಿಣದ ರಾಡ್‌ನಿಂದ ಬೀಗ ಮುರಿದು ಹಾಲಿನ ಡೈರಿ ಒಳಗೆ ನುಗ್ಗಿ 50 ಸಾವಿರ ರೂ.ಗಳಷ್ಟು ನಗದನ್ನು ದೋಚಿ ಪರಾರಿಯಾಗಿದ್ದಾರೆ. ಕಳ್ಳರ ಕೈಚಳಕದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬ್ಯಾರಿ ಭಾಷೆ ಮಾತನಾಡಿ ಕಳ್ಳತನ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಕಳ್ಳರ ಕರಾಮತ್ತು ಡೈರಿಯಲ್ಲಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಸಂಬಂಧ ಮಡಿಕೇರಿ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

6 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

6 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

6 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

6 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

6 hours ago