Pushing during Dasara prize distribution: DYSP injured; admitted to hospital
ಮಡಿಕೇರಿ : ದಸರಾ ಅಂಗವಾಗಿ ನಡೆದ ದಶಮಂಟಪಗಳ ಶೋಭಾಯಾತ್ರೆಯ ಬಹುಮಾನ ವಿತರಣೆ ಸಂದರ್ಭದಲ್ಲಿ ವೇದಿಕೆ ಹತ್ತಿ ಗಲಾಟೆ ಮಾಡಲು ಯತ್ನಿಸಿದ ಯುವಕರನ್ನು ಕೆಳಗೆ ಕಳುಹಿಸಲು ಯತ್ನಿಸುತ್ತಿದ್ದ ಡಿವೈಎಸ್ಪಿಯೊಬ್ಬರಿಗೆ ಗಾಯಗಳಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ದಶಮಂಟಪಗಳ ಬಹುಮಾನ ವಿತರಣೆ ವೇಳೆ ಈ ಬಾರಿಯೂ ಅಸಮಾಧಾನ ವ್ಯಕ್ತವಾಗಿದ್ದು, ಕರವಲೆ ಭಗವತಿ ದೇವಾಲಯದ ಮಂಟಪ ಸಮಿತಿ ಸದಸ್ಯರು ಬಹುಮಾನ ವಿತರಣೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ವೇದಿಕೆ ಹತ್ತಿ ಅಸಮಾಧಾನ ಹೊರಹಾಕಿದ್ದರು. ಇದೇ ವೇಳೆ ಯುವಕರನ್ನು ಕಳುಹಿಸಲು ಡಿವೈಎಸ್ಪಿ ಸೂರಜ್ ವೇದಿಕೆ ಏರಿದ್ದರು. ಈ ವೇಳೆ ತಳ್ಳಾಟ ನೂಕಾಟ ನಡೆದಿದ್ದು, ಸೂರಜ್ ಅವರು ವೇದಿಕೆಯಿಂದ ಕೆಳಭಾಗಕ್ಕೆ ಬಿದ್ದಿದ್ದಾರೆ. ಘಟನೆಯಿಂದ ತಲೆ ಹಾಗೂ ಕಾಲಿನ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
ಇದನ್ನು ಓದಿ : ಮಡಿಕೇರಿ ದಸರೆಗೆ ಅದ್ದೂರಿ ತೆರೆ
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಬೆಳಿಗ್ಗೆ ೭.೪೫ರಿಂದ ೮ ಗಂಟೆ ಸಮಯದಲ್ಲಿ ಯುವಕರ ತಂಡ ಬಹುಮಾನ ವಿತರಣೆ ಸಂಬಂಧವಾಗಿ ಅಸಮಾಧಾನ ಹೊರಹಾಕಲು ವೇದಿಕೆ ಏರಿದ್ದರು. ಈ ವೇಳೆ ಯಕ್ಷಿತ್ ಎಂಬ ಯುವಕನನ್ನು ಕೆಳಗಿಳಿಸಲು ಡಿವೈಎಸ್ಪಿ ಹಾಗೂ ಸಬ್ ಇನ್ಸ್ಪೆಕ್ಟರ್ ಪ್ರಯತ್ನಿಸಿದ್ದರು. ಆ ಸಂದರ್ಭದಲ್ಲಿ ಯಕ್ಷಿತ್ ಡಿವೈಎಸ್ಪಿ ಅವರ ಮಾತಿಗೆ ಬೆಲೆ ಕೊಡದೆ ಅವರನ್ನು ತಳ್ಳಿರುವುದರಿಂದ ಮೇಲಿನಿಂದ ಕೆಳಕ್ಕೆ ಬಿದ್ದಿದ್ದಾರೆ. ಅವರಿಗೆ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಬಿಎನ್ಎಸ್ ಆಕ್ಟ್ ೧೩೨, ೩೫೫ರಡಿ ಪ್ರಕರಣ ದಾಖಲಿಸುತ್ತಿದ್ದೇವೆ ಎಂದರು.
ಪ್ರತಿ ಬಾರಿಯೂ ಬಹುಮಾನ ವಿತರಣೆ ವೇಳೆ ಗಲಾಟೆ ನಡೆಯುತ್ತದೆ. ಈ ಬಾರಿ ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಆದರೂ ಸ್ಥಳದಲ್ಲಿ ಗಲಾಟೆ ಮಾಡಲಾಗಿದ್ದು, ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…
ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ದರ ರೂ.೬೦…
ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…
ಟಿ-೨೦ವಿಶ್ವಕಪ್ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ !…
ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ…
ಮೈಸೂರಿನ ಮಹಾರಾಜ ಕಾಲೇಜಿಗೆ ೧೩೭ ವರ್ಷಗಳ ಇತಿಹಾಸವಿದೆ. ಕಾಲೇಜಿನಲ್ಲಿ ಉತ್ತಮ ಬೋಧನಾ ವ್ಯವಸ್ಥೆಯೂ ಇದ್ದು, ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಇಲ್ಲಿ…