Pushing during Dasara prize distribution: DYSP injured; admitted to hospital
ಮಡಿಕೇರಿ : ದಸರಾ ಅಂಗವಾಗಿ ನಡೆದ ದಶಮಂಟಪಗಳ ಶೋಭಾಯಾತ್ರೆಯ ಬಹುಮಾನ ವಿತರಣೆ ಸಂದರ್ಭದಲ್ಲಿ ವೇದಿಕೆ ಹತ್ತಿ ಗಲಾಟೆ ಮಾಡಲು ಯತ್ನಿಸಿದ ಯುವಕರನ್ನು ಕೆಳಗೆ ಕಳುಹಿಸಲು ಯತ್ನಿಸುತ್ತಿದ್ದ ಡಿವೈಎಸ್ಪಿಯೊಬ್ಬರಿಗೆ ಗಾಯಗಳಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ದಶಮಂಟಪಗಳ ಬಹುಮಾನ ವಿತರಣೆ ವೇಳೆ ಈ ಬಾರಿಯೂ ಅಸಮಾಧಾನ ವ್ಯಕ್ತವಾಗಿದ್ದು, ಕರವಲೆ ಭಗವತಿ ದೇವಾಲಯದ ಮಂಟಪ ಸಮಿತಿ ಸದಸ್ಯರು ಬಹುಮಾನ ವಿತರಣೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ವೇದಿಕೆ ಹತ್ತಿ ಅಸಮಾಧಾನ ಹೊರಹಾಕಿದ್ದರು. ಇದೇ ವೇಳೆ ಯುವಕರನ್ನು ಕಳುಹಿಸಲು ಡಿವೈಎಸ್ಪಿ ಸೂರಜ್ ವೇದಿಕೆ ಏರಿದ್ದರು. ಈ ವೇಳೆ ತಳ್ಳಾಟ ನೂಕಾಟ ನಡೆದಿದ್ದು, ಸೂರಜ್ ಅವರು ವೇದಿಕೆಯಿಂದ ಕೆಳಭಾಗಕ್ಕೆ ಬಿದ್ದಿದ್ದಾರೆ. ಘಟನೆಯಿಂದ ತಲೆ ಹಾಗೂ ಕಾಲಿನ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
ಇದನ್ನು ಓದಿ : ಮಡಿಕೇರಿ ದಸರೆಗೆ ಅದ್ದೂರಿ ತೆರೆ
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಬೆಳಿಗ್ಗೆ ೭.೪೫ರಿಂದ ೮ ಗಂಟೆ ಸಮಯದಲ್ಲಿ ಯುವಕರ ತಂಡ ಬಹುಮಾನ ವಿತರಣೆ ಸಂಬಂಧವಾಗಿ ಅಸಮಾಧಾನ ಹೊರಹಾಕಲು ವೇದಿಕೆ ಏರಿದ್ದರು. ಈ ವೇಳೆ ಯಕ್ಷಿತ್ ಎಂಬ ಯುವಕನನ್ನು ಕೆಳಗಿಳಿಸಲು ಡಿವೈಎಸ್ಪಿ ಹಾಗೂ ಸಬ್ ಇನ್ಸ್ಪೆಕ್ಟರ್ ಪ್ರಯತ್ನಿಸಿದ್ದರು. ಆ ಸಂದರ್ಭದಲ್ಲಿ ಯಕ್ಷಿತ್ ಡಿವೈಎಸ್ಪಿ ಅವರ ಮಾತಿಗೆ ಬೆಲೆ ಕೊಡದೆ ಅವರನ್ನು ತಳ್ಳಿರುವುದರಿಂದ ಮೇಲಿನಿಂದ ಕೆಳಕ್ಕೆ ಬಿದ್ದಿದ್ದಾರೆ. ಅವರಿಗೆ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಬಿಎನ್ಎಸ್ ಆಕ್ಟ್ ೧೩೨, ೩೫೫ರಡಿ ಪ್ರಕರಣ ದಾಖಲಿಸುತ್ತಿದ್ದೇವೆ ಎಂದರು.
ಪ್ರತಿ ಬಾರಿಯೂ ಬಹುಮಾನ ವಿತರಣೆ ವೇಳೆ ಗಲಾಟೆ ನಡೆಯುತ್ತದೆ. ಈ ಬಾರಿ ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಆದರೂ ಸ್ಥಳದಲ್ಲಿ ಗಲಾಟೆ ಮಾಡಲಾಗಿದ್ದು, ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಮೈಸೂರಿನ ಹೆಬ್ಬಾಳು ಬಡಾವಣೆಯ ಸೂರ್ಯಬೇಕರಿ ಸಮೀಪ ಎರಡನೇ ಅಡ್ಡರಸ್ತೆಯ ಬಳಿ ಇರುವ ಚರಂಡಿಯನ್ನು ಕಳೆದ ಎರಡು-ಮೂರು ತಿಂಗಳಿನಿಂದ ಸ್ವಚ್ಛಗೊಳಿಸದೇ ಇರುವುದರಿಂದ…
ಮೈಸೂರಿನ ಲಷ್ಕರ್ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ವೀರನಗೆರೆಯಲ್ಲಿ ೨-೯-೧೯೮೫ ರಂದು ಉಚಿತ ವಾಚನಾಲಯವನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅಂದಿನ…
ಮೈಸೂರಿನ ಲಿಂಗದೇವರಕೊಪ್ಪಲು ಗ್ರಾಮದಲ್ಲಿರುವ ಗಾರ್ಮೆಂಟ್ಸ್, ಕಾರ್ಖಾನೆಗಳಿಗೆ ಸುತ್ತಮುತ್ತಲಿನ ಕಾರ್ಮಿಕರು ಬರುತ್ತಾರೆ. ಆದರೆ ಈ ಸ್ಥಳದಲ್ಲಿ ಮೈಸೂರಿನಿಂದ ಮಡಿಕೇರಿ, ಹಾಸನ ಕಡೆಗೆ…
ಸುತ್ತೂರು ಜಾತ್ರಾ ಮಹೋತ್ಸವ ನಿಜಕ್ಕೂ ಸಾಂಸ್ಕೃತಿಕ ಉತ್ಸವವೇ ಆಗಿದೆ. ಎಲ್ಲ ರೀತಿಯ ಮನರಂಜನೆಗಳ ಜೊತೆಗೆ ಮನೋವಿಕಾಸವನ್ನು ಮೂಡಿಸುವ ವಿಶಿಷ್ಟ ಜಾತ್ರೆ…
ಕೊಂಡೋತ್ಸವಕ್ಕೆ ೫ ಎತ್ತಿನ ಗಾಡಿಗಳಲ್ಲಿ ಖಗ್ಗಲಿ ಸೌದೆ ತಂದ ಗ್ರಾಮಸ್ಥರು ಮೈಸೂರು: ತಾಲ್ಲೂಕಿನ ಜಯಪುರ ಗ್ರಾಮದ ಶ್ರೀ ಜೇಡಿಕಟ್ಟೆ ಮಹದೇಶ್ವರ…
ಎಂ.ಗೂಳೀಪುರ ನಂದೀಶ್ ಕೊಳೆತ ಪದಾರ್ಥಗಳಿಂದ ದುರ್ನಾತ; ಹಲವು ಅಂಗಡಿಗಳು ನಿರುಪಯುಕ್ತ ಯಳಂದೂರು: ಪಟ್ಟಣದ ಕೇಂದ್ರಸ್ಥಾನದಲ್ಲಿನ ಸಂತೆ ಮೈದಾನವು ಮೂಲಸೌಲಭ್ಯಗಳಿಂದ ವಂಚಿತವಾಗಿದೆ.…