ಕೊಡಗು

ದಸರಾ ಬಹುಮಾನ ವಿತರಣೆ ವೇಳೆ ತಳ್ಳಾಟ : DYSP ಗೆ ಗಾಯ ; ಆಸ್ಪತ್ರೆಗೆ ದಾಖಲು

ಮಡಿಕೇರಿ : ದಸರಾ ಅಂಗವಾಗಿ ನಡೆದ ದಶಮಂಟಪಗಳ ಶೋಭಾಯಾತ್ರೆಯ ಬಹುಮಾನ ವಿತರಣೆ ಸಂದರ್ಭದಲ್ಲಿ ವೇದಿಕೆ ಹತ್ತಿ ಗಲಾಟೆ ಮಾಡಲು ಯತ್ನಿಸಿದ ಯುವಕರನ್ನು ಕೆಳಗೆ ಕಳುಹಿಸಲು ಯತ್ನಿಸುತ್ತಿದ್ದ ಡಿವೈಎಸ್‌ಪಿಯೊಬ್ಬರಿಗೆ ಗಾಯಗಳಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ದಶಮಂಟಪಗಳ ಬಹುಮಾನ ವಿತರಣೆ ವೇಳೆ ಈ ಬಾರಿಯೂ ಅಸಮಾಧಾನ ವ್ಯಕ್ತವಾಗಿದ್ದು, ಕರವಲೆ ಭಗವತಿ ದೇವಾಲಯದ ಮಂಟಪ ಸಮಿತಿ ಸದಸ್ಯರು ಬಹುಮಾನ ವಿತರಣೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ವೇದಿಕೆ ಹತ್ತಿ ಅಸಮಾಧಾನ ಹೊರಹಾಕಿದ್ದರು. ಇದೇ ವೇಳೆ ಯುವಕರನ್ನು ಕಳುಹಿಸಲು ಡಿವೈಎಸ್‌ಪಿ ಸೂರಜ್ ವೇದಿಕೆ ಏರಿದ್ದರು. ಈ ವೇಳೆ ತಳ್ಳಾಟ ನೂಕಾಟ ನಡೆದಿದ್ದು, ಸೂರಜ್ ಅವರು ವೇದಿಕೆಯಿಂದ ಕೆಳಭಾಗಕ್ಕೆ ಬಿದ್ದಿದ್ದಾರೆ. ಘಟನೆಯಿಂದ ತಲೆ ಹಾಗೂ ಕಾಲಿನ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಇದನ್ನು ಓದಿ : ಮಡಿಕೇರಿ ದಸರೆಗೆ ಅದ್ದೂರಿ ತೆರೆ

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಬೆಳಿಗ್ಗೆ ೭.೪೫ರಿಂದ ೮ ಗಂಟೆ ಸಮಯದಲ್ಲಿ ಯುವಕರ ತಂಡ ಬಹುಮಾನ ವಿತರಣೆ ಸಂಬಂಧವಾಗಿ ಅಸಮಾಧಾನ ಹೊರಹಾಕಲು ವೇದಿಕೆ ಏರಿದ್ದರು. ಈ ವೇಳೆ ಯಕ್ಷಿತ್ ಎಂಬ ಯುವಕನನ್ನು ಕೆಳಗಿಳಿಸಲು ಡಿವೈಎಸ್‌ಪಿ ಹಾಗೂ ಸಬ್ ಇನ್ಸ್‌ಪೆಕ್ಟರ್ ಪ್ರಯತ್ನಿಸಿದ್ದರು. ಆ ಸಂದರ್ಭದಲ್ಲಿ ಯಕ್ಷಿತ್ ಡಿವೈಎಸ್‌ಪಿ ಅವರ ಮಾತಿಗೆ ಬೆಲೆ ಕೊಡದೆ ಅವರನ್ನು ತಳ್ಳಿರುವುದರಿಂದ ಮೇಲಿನಿಂದ ಕೆಳಕ್ಕೆ ಬಿದ್ದಿದ್ದಾರೆ. ಅವರಿಗೆ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಬಿಎನ್‌ಎಸ್ ಆಕ್ಟ್ ೧೩೨, ೩೫೫ರಡಿ ಪ್ರಕರಣ ದಾಖಲಿಸುತ್ತಿದ್ದೇವೆ ಎಂದರು.

ಪ್ರತಿ ಬಾರಿಯೂ ಬಹುಮಾನ ವಿತರಣೆ ವೇಳೆ ಗಲಾಟೆ ನಡೆಯುತ್ತದೆ. ಈ ಬಾರಿ ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಆದರೂ ಸ್ಥಳದಲ್ಲಿ ಗಲಾಟೆ ಮಾಡಲಾಗಿದ್ದು, ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago