ಕೊಡಗು

ಕೊಡಗಿನ ದೇವಾಲಯಗಳಲ್ಲಿ ಸರಣಿ ಕಳವು

ಘಂಟೆ ಮಾತ್ರ ಕಳವಾಗುತ್ತಿರುವ ಬಗ್ಗೆ ಅಖಿಲ ಕೊಡವ ಸಮಾಜ ಯೂತ್‌ ವಿಂಗ್ ಆತಂಕ.

ಮಡಿಕೇರಿ: ಕೊಡಗು ಜಿಲ್ಲೆಯ ದೇವಸ್ಥಾನಗಳಲ್ಲಿ ಇದೀಗ ಘಂಟೆಗಳ ಸದ್ದು ಪೊಲೀಸರ ನಿದ್ದೆ ಕೆಡಿಸಿದ್ದು, ಒಂದು ವಾರದೊಳಗೆ ಒಂದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರೋಬ್ಬರಿ ನಾಲ್ಕು ದೇವಸ್ಥಾನಗಳಲ್ಲಿ ಘಂಟೆಗಳು ಕಳ್ಳತನವಾಗಿದೆ. ಮಾತ್ರವಲ್ಲ ತಿಂಗಳು ತುಂಬುವ ಹೊತ್ತಿಗೆ ಇದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐದು ದೇವಸ್ಥಾನಗಳಲ್ಲಿ ಕಳ್ಳತನ ನಡೆದಿದ್ದು, ದೇವಸ್ಥಾನದ ಹುಂಡಿಗಳನ್ನು ಬಿಟ್ಟು ಕೇವಲ ಘಂಟೆಗಳನ್ನು ಮಾತ್ರ ಕಳ್ಳತನ ಮಾಡಿರುವ ಬಗ್ಗೆ ಅಖಿಲ ಕೊಡವ ಸವಾಜದ   ಯೂತ್‌ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜಿಲ್ಲೆಯ ಹಲವೆಡೆ ದೇವಸ್ಥಾನಗಳಲ್ಲಿ ಘಂಟೆ ಕಳ್ಳತನವಾಗುತ್ತಿದ್ದು, ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ  ಸರಹದ್ದಿನಲ್ಲಿಯೇ ಒಂದು ವಾರದೊಳಗೆ ನಾಲ್ಕು ದೇವಸ್ಥಾನಗಳಲ್ಲಿ ಘಂಟೆಗಳು ಕಳ್ಳತನವಾಗಿದೆ.

ಒಂದು ತಿಂಗಳ ಹಿಂದೆ ಇದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಕಳ್ಳತನ ಸೇರಿದಂತೆ ಒಟ್ಟು ಐದು ದೇವಸ್ಥಾನಗಳಲ್ಲಿಯೂ ಕೂಡ ಕೇವಲ ಗಂಟೆಗಳನ್ನು ಮಾತ್ರ ಕಳ್ಳತನ ಮಾಡಿದ್ದಾರೆ. ಇದರ ಉದ್ದೇಶ ಏನೂ ಎಂದು ಅರ್ಥ ಆಗುತ್ತಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಪೊನ್ನಂಪೇಟೆ ಠಾಣಾ ವ್ಯಾಪ್ತಿಯ  ಪೊನ್ನಪ್ಪಸಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳೂರು ಕಲ್ಲುಗುಡಿ ಈಶ್ವರ ದೇವಸ್ಥಾನದಲ್ಲಿ 5 ಕಂಚಿನ ಘಂಟೆ ಹಾಗೂ ಬೆಸಗೂರು ಗ್ರಾಮದ ಮಹಾದೇವರ ದೇವಸ್ಥಾನ ಮತ್ತು ದುರ್ಗಿ ದೇವಸ್ಥಾನ ಎರಡು ಸೇರಿ 21ಕಂಚಿನ ಘಂಟೆಗಳು ಕಳ್ಳತನವಾಗಿವೆ. ಪೊಲೀಸರು ಇದರ ಹುಡುಕಾಟದಲ್ಲಿ ಇರುವಾಗಲೇ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟುವಿನಲ್ಲಿ ಸುಮಾರು 900 ವರ್ಷಕ್ಕೂ ಹಿಂದಿನ ಇತಿಹಾಸವಿರುವ ಶ್ರೀ ಭದ್ರಕಾಳಿ ದೇವಸ್ಥಾನದಲ್ಲಿ ಮಧ್ಯರಾತ್ರಿ 2.15 ಕ್ಕೆ ಕಳ್ಳರು ನುಗ್ಗಿದ್ದು10 ಘಂಟೆಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

ದೇವಸ್ಥಾನದ ಆಡಳಿತ ಮಂಡಳಿ ದೂರಿನ ಮೇರೆ ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಹಾಗೂ ಗೋಣಿಕೊಪ್ಪಲು ವೃತ್ತ ನಿರೀಕ್ಷಕರನೊಳಗೊಂಡ ತಂಡ ಸೇರಿದಂತೆ ಜಿಲ್ಲಾ ಅಪರಾಧ ದಳದ ತಂಡ ಸೇರಿದಂತೆ ವಿರಾಜಪೇಟೆ ಡಿವೈಎಸ್ಪಿ ಹಾಗೂ ಜಿಲ್ಲೆಯ ವಿವಿಧ ಪೊಲೀಸ್ ಅಧಿಕಾರಿಗಳ ತಂಡವೇ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ದ.ಕೊಡಗಿನಲ್ಲಿ ಘಂಟೆ ಕಳವು

ಫೆಬ್ರವರಿಯಲ್ಲಿ ಗೋಣಿಕೊಪ್ಪಲು ಪೊಲೀಸ್ ಠಾಣಾ ವ್ಯಾಪ್ತಿಯ  ಮಾಯಮುಡಿ ಶ್ರೀ ಕಮಟೆ ಮಹಾದೇವರ ದೇವಸ್ಥಾದಲ್ಲಿ ಅಳವಡಿಸಲಾಗಿದ್ದ 105ಕೆ.ಜಿ. ತೂಕದ ಘಂಟೆಯನ್ನು ಕಳವು ಮಾಡಿದ್ದು, ರಾತ್ರಿ ಹೊತ್ತು ಬಂದ ಕಳ್ಳರು ದೇವಸ್ಥಾನದಲ್ಲಿ ಅಳವಡಿಸಿದ ಸಿ.ಸಿ.ಕ್ಯಾಮೆರಾವನ್ನು ತಿರುಗಿಸಿ ಕಳ್ಳತನ ಮಾಡಿ ಘಂಟೆಯನ್ನು ಕೊಂಡೊಯ್ದಿದ್ದಾರೆ ಎನ್ನಲಾಗಿದೆ.

 ಇದಾದ ಆರು ತಿಂಗಳ ಬಳಿಕ ನಾಪೋಕ್ಲುವಿನ ಮಕ್ಕಿ ಶಾಸ್ತಾವು ದೇವರ ಸನ್ನಿಧಿಯಲ್ಲಿ ಬೃಹತ್ ಗಾತ್ರದ ಘಂಟೆಗಳನ್ನು ಕಳ್ಳತನ ಮಾಡುವ ಮೂಲಕ ಆರಂಭವಾದ ಘಂಟೆಗಳ ಕಳ್ಳತನ ಇದೀಗ ದಕ್ಷಿಣ ಕೊಡಗಿನಲ್ಲಿ ಬಹಳ ಸದ್ದು ಮಾಡುತ್ತಿದೆ.

andolana

Recent Posts

ಪಂಜು ಗಂಗೊಳ್ಳಿ ಅವರ ವಾರದ ಅಂಕಣ | ಹೆಣ್ಣು ಭ್ರೂಣ ಹಂತಕ ವೈದ್ಯರನ್ನು ಬೇಟೆಯಾಡುವ ವರ್ಷಾ ದೇಶಪಾಂಡೆ

50ಕ್ಕೂ ಹೆಚ್ಚು ಸ್ಟಿಂಗ್‌ ಆಪರೇಷನ್‌ ; 20 ವೈದ್ಯರುಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿ ಮಹಾರಾಷ್ಟ್ರದ ಭೀಡ್ ಜಿಲ್ಲೆಯ ಪಾರ್ಲಿ ಗ್ರಾಮದ…

16 mins ago

ರಕ್ತದ ಕ್ಯಾನ್ಸ್‌ರ್‌ಗೆ ಅಸ್ತ್ರ ʼಭಾರತ್‌ ಕ್ಯಾನ್ಸರ್‌ ಆಸ್ಪತ್ರೆʼ

ಮೈಸೂರಿನ ಭಾರತ್‌ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಆಂದೋಲನ ಕಚೇರಿಯಲ್ಲಿ ನಡೆದ ಫೋನ್‌ ಇನ್‌ ಕಾರ್ಯಕ್ರಮ ಮೈಸೂರು : ಕ್ಯಾನ್ಸರ್…

40 mins ago

ಬೆಂಗಳೂರಲ್ಲಿ ಭೀಕರ ಘಟನೆ ; ತನ್ನ ಪ್ರೇಮಿಯನ್ನು ಬೆಂಕಿ ಹಚ್ಚಿ ಕೊಂದ ಪ್ರಿಯತಮೆ

ಬೆಂಗಳೂರು : ಫಾರಿನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿ ಪ್ರಿಯಕರನ ಕೈಕಾಲು ಕಟ್ಟಿದ ಪ್ರಿಯತಮೆ ಆತನನ್ನು ಬೆಂಕಿ…

1 hour ago

ಕೊಡಗು | ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ; ಇಬ್ಬರ ಬಂಧನ

ಕೊಡಗು : ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ…

1 hour ago

ಕುಶಾಲನಗರ | ಅಪ್ರಾಪ್ತೆಯ ನಿಶ್ಚಿತಾರ್ಥ : ಅಧಿಕಾರಿಗಳಿಂದ ಕ್ರಮ

ಕುಶಾಲನಗರ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಿಶ್ಚಿತಾರ್ಥ ನಡೆಸಲು ಮುಂದಾದ ಘಟನೆ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದ್ದು, ಅಧಿಕಾರಿಗಳು…

2 hours ago

ದೇವನೂರಿನಲ್ಲಿ 9 ಎಕರೆ ಒತ್ತುವರಿ ತೆರವು ; ಎಂಡಿಎ ಕಾರ್ಯಾಚರಣೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನಗರದ ಹೊರವಲಯದ ದೇವನೂರಿನಲ್ಲಿ ಎರಡು ಕಡೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒತ್ತುವರಿಯಾಗಿದ್ದ…

4 hours ago