ಶನಿವಾರಸಂತೆ : ಇಲ್ಲಿನ ತ್ಯಾಗರಾಜ ಕಾಲೋನಿ ಮತ್ತು ಕೊಡ್ಲಿಪೇಟೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಶನಿವಾರಸಂತೆಯ ತ್ಯಾಗರಾಜ ಕಾಲೋನಿಯ ನಿವಾಸಿ ಯೋಗೀಶ್ ಹಾಗೂ ದೊಡ್ಡ ಕೊಡ್ಲಿ ನಿವಾಸಿ ಮೊಹಮ್ಮದ್ ಅಜ್ಗರ್ ಬಂದಿತ ಆರೋಪಿಗಳಾಗಿದ್ದು ಇವರ ಬಳಿಯಿಂದ 240 ಗ್ರಾಂ ಗಾಂಜಾ ಮತ್ತು ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಎ.ಎಸ್.ಪಿ ಡಾ. ಬೆನಕ ಪ್ರಸಾದ್, ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಗಂಗಾಧರಪ್ಪ, ಶನಿವಾರ ಸಂತೆ ಠಾಣೆಯ ಪಿಎಸ್ಐ ಗಳಾದ ಗೋವಿಂದರಾಜು, ಚಂದ್ರು ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶನಿವಾರ ಸಂತೆ ಹಾಗೂ ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟ ದಂದೆ ತೆರೆಯ ಮರೆಯಲ್ಲಿ ನಡೆಯುತ್ತಿತ್ತು ಇದೀಗ ಪ್ರೊಬೆಶನರಿ ಐಪಿಎಸ್ ಅಧಿಕಾರಿ ಡಾ.ಬೆನಕ ಪ್ರಸಾದ್ ರವರ ಆಸಕ್ತಿ ಹಾಗೂ ನೇತೃತ್ವದಿಂದ ಇಬ್ಬರು ಆರೋಪಿಗಳನ್ನು ಬಂಧಿಸಿ ಮಾದಕ ವಸ್ತುಗಳ ಮಾರಾಟಕ್ಕೆ ಕಡಿವಾಣ ಹಾಕಲು ಮುಂದಾಗಿರುವುದನ್ನು ಇಲ್ಲಿನ ಸಾರ್ವಜನಿಕರು ಸ್ವಾಗತಿಸಿದ್ದಾರೆ.
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…
ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…
ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…