Mysore
28
scattered clouds

Social Media

ಭಾನುವಾರ, 26 ಏಪ್ರಿಲ 2026
Light
Dark

ವಯನಾಡು ಭೂಕುಸಿತ ದುರಂತ: ಸಿದ್ದಾಪುರದ ಬಾಲಕ ಸಾವು

ಮಡಿಕೇರಿ: ವಯನಾಡು ಮೇಪಾಡಿ ಭೂಕುಸಿತ ದುರಂತದಲ್ಲಿ ಸಂಬಂಧಿಕರ ಮನೆಗೆ ತೆರಳಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ಸಿದ್ದಾಪುರ ಗುಯ್ಯ ಸರಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿರುವ ರೋಹಿತ್ ಎಂಬ ವಿದ್ಯಾರ್ಥಿಯು ಸಾವನ್ನಪ್ಪಿದ್ದು ಬುಧವಾರ ಬಾಲಕನ ಮೃತದೇಹ ಪತ್ತೆಯಾಗಿದೆ.

ಗುಯ್ಯ ಶಾಲೆ ಬಳಿ ಬಾಡಿಗೆ ಮನೆಯಲ್ಲಿರುವ ರವಿ ಮತ್ತು ಕವಿತಾ ದಂಪತಿಗಳು ಕೂಲಿಕಾರ್ಮಿಕರಾಗಿದ್ದು ತಾಯಿ ಕವಿತಾಳೊಂದಿಗೆ ಮೇಪಾಡಿ ಹೋಗಿದ್ದ ರೋಹಿತ್ ಸಂಬಂಧಿಕರ ಮನೆಯಲ್ಲಿದ್ದ. ಸೋಮವಾರ ರಾತ್ರಿ ನಡೆದ ವಯನಾಡು ದುರಂತದಲ್ಲಿ ಬಾಲಕ ಕೂಡ ಮಣ್ಣಿನಡಿ ಕೊಚ್ಚಿಹೋಗಿದ್ದು ಇಂದು ರಕ್ಷಣಾ ಕಾರ್ಯಾಚರಣೆ ಮಾಡುತ್ತಿರುವ ತಂಡಕ್ಕೆ ಬಾಲಕನ ಮೃತದೇಹ ದೊರೆತಿದೆ.

Tags:
error: Content is protected !!