ಕೊಡಗು

ವಯನಾಡು ಭೂಕುಸಿತ ದುರಂತ: ಸಿದ್ದಾಪುರದ ಬಾಲಕ ಸಾವು

ಮಡಿಕೇರಿ: ವಯನಾಡು ಮೇಪಾಡಿ ಭೂಕುಸಿತ ದುರಂತದಲ್ಲಿ ಸಂಬಂಧಿಕರ ಮನೆಗೆ ತೆರಳಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ಸಿದ್ದಾಪುರ ಗುಯ್ಯ ಸರಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿರುವ ರೋಹಿತ್ ಎಂಬ ವಿದ್ಯಾರ್ಥಿಯು ಸಾವನ್ನಪ್ಪಿದ್ದು ಬುಧವಾರ ಬಾಲಕನ ಮೃತದೇಹ ಪತ್ತೆಯಾಗಿದೆ.

ಗುಯ್ಯ ಶಾಲೆ ಬಳಿ ಬಾಡಿಗೆ ಮನೆಯಲ್ಲಿರುವ ರವಿ ಮತ್ತು ಕವಿತಾ ದಂಪತಿಗಳು ಕೂಲಿಕಾರ್ಮಿಕರಾಗಿದ್ದು ತಾಯಿ ಕವಿತಾಳೊಂದಿಗೆ ಮೇಪಾಡಿ ಹೋಗಿದ್ದ ರೋಹಿತ್ ಸಂಬಂಧಿಕರ ಮನೆಯಲ್ಲಿದ್ದ. ಸೋಮವಾರ ರಾತ್ರಿ ನಡೆದ ವಯನಾಡು ದುರಂತದಲ್ಲಿ ಬಾಲಕ ಕೂಡ ಮಣ್ಣಿನಡಿ ಕೊಚ್ಚಿಹೋಗಿದ್ದು ಇಂದು ರಕ್ಷಣಾ ಕಾರ್ಯಾಚರಣೆ ಮಾಡುತ್ತಿರುವ ತಂಡಕ್ಕೆ ಬಾಲಕನ ಮೃತದೇಹ ದೊರೆತಿದೆ.

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

18 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

23 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

27 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago